ತ್ರಿಪುರಾ: ಮಾಜಿ ಸಚಿವ ಹಾಗೂ ತ್ರಿಪುರಾ ಬಿಜೆಪಿ ಶಾಸಕ ಸುರಜಿತ್ ದತ್ತಾ ಗುರುವಾರ ಬೆಳಗ್ಗೆ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಆರಂಭದಲ್ಲಿ ತ್ರಿಪುರಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್ ಆಂಬ್ಯುಲೆನ್ಸ್ ಮೂಲಕ ಕೋಲ್ಕತ್ತಾಕ್ಕೆ ಕರೆದೊಯ್ಯಲಾಯಿತು. ಸುರಜಿತ್ ದತ್ತಾ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಸುರಜಿತ್ ದತ್ತಾ ಈ ಹಿಂದೆ ಕಾಂಗ್ರೆಸ್ನಲ್ಲಿದ್ದರು, 2018ರ ವಿಧಾನಸಭಾ ಚುನಾವಣೆಗೂ ಮೊದಲು ಬಿಜೆಪಿ ಸೇರಿದ್ದರು. 1988 ಹಾಗೂ 1993ರ ನಡುವೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. 2013ರ ಮಾರ್ಚ್ನಲ್ಲಿ ತ್ರಿಪುರಾದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು, ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಹಿರಿಯ ನಾಯಕ ಈ ಹಿಂದೆ ಕಾಂಗ್ರೆಸ್ನಲ್ಲಿದ್ದರು ಮತ್ತು 2018 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಿದ್ದರು. ಅವರು 1988 ಮತ್ತು 1993 ರ ನಡುವೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.