Categories: ದೇಶ

ಅನೇಕ ಕಡೆಗಳಲ್ಲಿ ಟ್ವಿಟರ್ ಸರ್ವರ್ ಡೌನ್: ಬದಲಾವಣೆ ತಂದ ಮಸ್ಕ್‌

ಟೆಸ್ಲಾ ಸಿಎಒ ಎಲಾನ್ ಮಸ್ಕ್ಅ ವರು ಟ್ವಿಟರ್ ಅನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡ ಬಳಿಕ ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ. ಇದೀಗ ಶನಿವಾರ ರಾತ್ರಿಯಿಂದ ಭಾರತ ಸೇರಿದಂತೆ ವಿಶ್ವದ ಅನೇಕ ಭಾಗಗಳಲ್ಲಿ ಟ್ವಿಟರ್ ಸರ್ವರ್ ಡೌನ್ ಎಂದು ವರದಿ ಆಗಿದೆ.

ಮಸ್ಕ್ ಒಡೆತನದ ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಈ ವರ್ಷ ಎದುರಿಸುತ್ತಿರುವ ಮೂರನೇ ಟ್ವಿಟರ್ ಡೌನ್ ಇದಾಗಿದೆ. ಭಾರತ, ಅಮೆರಿಕ ಸೇರಿ ಜಗತ್ತಿನ ಬಹುತೇಕ ದೇಶಗಳಲ್ಲಿ ಟ್ವಿಟರ್‌ ಡೌನ್‌ ಆಗಿದ್ದು, ಸಾವಿರಾರು ಜನರಿಗೆ ಸೈಟ್‌ ರಿಫ್ರೆಶ್‌ ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ.

ಇನ್ನು ಬಳಿಕ ಈ ಹಿನ್ನೆಲೆಯಲ್ಲಿ ಮಸ್ಕ್‌ ಬದಲಾವಣೆಯ ಅಸ್ತ್ರ ಹೂಡಿದ್ದಾರೆ. ಅನಗತ್ಯ ಡೇಟಾ ಬಳಕೆ ಮಾಡೋದನ್ನ ತಪ್ಪಿಸುವುದು, ಕೆಲ ಪೋಸ್ಟ್‌ಗಳ ಮೂಲಕ ಕೆರಳಿಸುವ ಯತ್ನ ಮಾಡುತ್ತಿರುವುದು ಸೇರಿದಂತೆ ಹಲವು ವಿಷಯಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಟ್ವಿಟ್ಟರ್‌ ಪ್ರತಿದಿನದ ಪೋಸ್ಟ್‌ ವೀಕ್ಷಣೆಗೆ ಮಿತಿ ಹೇರಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಟ್ವಿಟ್ಟರ್‌ನಿಂದ ಪರಿಶೀಲಿಸಿದ ಖಾತೆ ಹೊಂದಿರುವವರು ನಿತ್ಯ 6,000 ಪೋಸ್ಟ್‌ ಮಾತ್ರ ವೀಕ್ಷಿಸಲು ಅಥವಾ ಓದಲು ಅವಕಾಶವಿದೆ. ಪರಿಶೀಲನೆಯಾಗದ ಖಾತೆದಾರರು ನಿತ್ಯ 600 ಮಾತ್ರ ವೀಕ್ಷಿಸಿ ಓದಲು ಅವಕಾಶವಿದೆ. ಅದೇ ರೀತಿ ಹೊಸದಾಗಿ ಖಾತೆ ಆರಂಭಿಸಿ ಪರಿಶೀಲನೆಯಾಗದ ಖಾತೆದಾರರು 300 ಪೋಸ್ಟ್‌ಗಳ ವೀಕ್ಷಣೆಗೆ ಮಿತಿ ಹೇರಲಾಗಿದೆ. ಈ ಕುರಿತು ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಲು ಸ್ವತಃ ಎಲಾನ್‌ ಮಸ್ಕ್‌ ಅವರೇ ಟ್ವೀಟ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

https://twitter.com/elonmusk/status/1675187969420828672?ref_src=twsrc%5Etfw%7Ctwcamp%5Etweetembed%7Ctwterm%5E1675187969420828672%7Ctwgr%5Ec565728d0eefaca374a8135f5c9829329c05aa30%7Ctwcon%5Es1_&ref_url=https%3A%2F%2Fpublictv.in%2Felon-musk-limits-number-of-posts-twitter-users-can-read-each-day%2F

Ashitha S

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

4 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

22 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

38 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

57 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago