ದೆಹಲಿ: ಲೋಕಸಭೆಯಲ್ಲಿ 2024ನೇ ಸಾಲಿನ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 6ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಮಾತನಾಡಿದ ಲೋಕಸಭಾ ಸ್ಪೀಕರ್, 2024ನೇ ಸಾಲಿನ ಬಜೆಟ್ ಪ್ರತಿಯನ್ನು ಸಂಸದರಿಗೆ ಬಜೆಟ್ ಓದಿದ ನಂತರ ಹಂಚಿಕೆ ಮಾಡಲಾಗುವುದು ಎಂದಿದ್ದಾರೆ. ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಧ್ಯಂತರ ಬಜೆಟ್ ಉತ್ತಮವಾಗಿರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇನ್ನು ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್ಗೆ ಒತ್ತು ಕೊಡಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ. ನಮ್ಮ ಯುವ ದೇಶವು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದಿದೆ, ಅದರ ವರ್ತಮಾನದ ಬಗ್ಗೆ ಹೆಮ್ಮೆಯಿದೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭರವಸೆ ಮತ್ತು ನಂಬಿಕೆಯನ್ನು ಹೊಂದಿದೆ. ನಮ್ಮ ಸರ್ಕಾರದ ಅತ್ಯುತ್ತಮ ಕೆಲಸದ ಆಧಾರದ ಮೇಲೆ ಜನರು ಮತ್ತೊಮ್ಮೆ ಬಲವಾದ ಜನಾದೇಶವನ್ನು ನೀಡುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು. ಅಲ್ಲದೇ ಬಡವರು, ಮಹಿಳೆಯರು ಮತ್ತು ಯುವಕರ ಕಡೆ ಗಮನ ಹರಿಸುವ ಅಗತ್ಯವಿದೆ ಎಂದು ಮಧ್ಯಂತರ ಬಜೆಟ್ ಮಂಡನೆಯಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು.
ಇನ್ನು ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭವಾಗಿದೆ. ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ 10 ವರ್ಷಗಳಲ್ಲಿ 28 ಪ್ರತಿಶತದಷ್ಟು ಹೆಚ್ಚಾಗಿದೆ. ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ. ಪ್ರಮುಖವಾಗಿ 2014ರಲ್ಲಿ ಪ್ರಧಾನಿ ಮೋದಿ ಅಧಿಕಾರ ಸ್ವೀಕರಿಸಿದಾಗ ಹಲವು ಸವಾಲುಗಳಿದ್ದವು. ಸಾರ್ವಜನಿಕರ ಹಿತದೃಷ್ಟಿಯಿಂದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಜನರಿಗೆ ಉದ್ಯೋಗವನ್ನು ಪಡೆಯಲು ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಮಾಡಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯತ್ತ ಸರ್ಕಾರದ ಗಮನ ಕೇಂದ್ರೀಕರಿಸಿದೆ ಮತ್ತು ಎಲ್ಲಾ ವರ್ಗ ಮತ್ತು ಜನರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯುತ್ತಿದೆ. 2047 ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ. ಎಂದರು.
ಈಗಾಗಲೇ ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಇತ್ತಎಲ್ಲಾ ಮೂಲಭೂತ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತಿವೆ, ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ. ಪ್ರಮುಖವಾಗಿ ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂದರು.
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…