News Karnataka Kannada
Thursday, May 02 2024
ಉತ್ತರ ಪ್ರದೇಶ

ಅಯೋಧ್ಯೆ – ಮಥುರಾ ಸುತ್ತಮುತ್ತ ಮದ್ಯ ಮಾರಾಟಕ್ಕೆ ನಿಷೇಧ: ಯೋಗಿ ಆದಿತ್ಯನಾಥ್‌

Uttar Pradesh: Uttar Pradesh CM Yogi Adityanath receives death threat, man arrested
Photo Credit :

 ಉತ್ತರ ಪ್ರದೇಶ: ಅಯೋಧ್ಯೆ ಮತ್ತು ಮಥುರಾದಲ್ಲಿನ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶ ಹೊರಡಿಸಿದ್ಧಾರೆ. ಜೊತೆಗೆ ಅಯೋಧ್ಯೆಯಲ್ಲಿನ ಮದ್ಯದಂಗಡಿ ಮಾಲೀಕರ ಪರವಾನಿಗೆಯನ್ನೂ ಕೂಡ ರದ್ದುಗೊಳಿಸಲಾಗಿದೆ.

ಈ ಆದೇಶವು ಇಂದಿನಿಂದಲೇ ಜಾರಿಗೆ ಬರುತ್ತಿದ್ದು ಮದ್ಯ, ಭಾಂಗ್‌ ಸೇರಿದಂತೆ 37 ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಅಯೋಧ್ಯೆ ರಾಮಮಂದಿರದ ಸುತ್ತ ಇರುವ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಿರುವ ಯೋಗಿ ಅವರಿಗೆ ಹಾಲು ಮಾರಾಟ ಮಾಡಬಹುದು ಎಂದು ಸಲಹೆ ನೀಡಿದ್ದಾರೆ. ಮಥುರಾದಲ್ಲೂ ಇದೇ ರೀತಿ ಮಾಡಿರುವ ಸರ್ಕಾರವು ಮಥುರಾದ ಹೆಸರಾಂತ ಹಾಲು ಉದ್ಯಮವನ್ನು ಪುನರುಜ್ಜೀವನಗೊಳಿಸಬಹುದು ಎಂದಿದೆ.

ಮಥುರಾದಲ್ಲಿ ಕಳೆದ ವರ್ಷವೇ ಮದ್ಯ ಮತ್ತು ಮಾಂಸ ಮಾರಾಟದ ಮೇಲೆ ನಿಷೇಧ ಹೇರಲಾಗಿತ್ತು. ನೂತನ ಆದೇಶದ ಅಡಿಯಲ್ಲಿ ಮಥುರಾದ ಹೊಟೆಲ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂರು ಬಾರ್‌ಗಳು ಹಾಗೂ ಎರಡು ಮದ್ಯದಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಆದೇಶ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು