News Karnataka Kannada
Friday, May 03 2024
ಉತ್ತರ ಪ್ರದೇಶ

ಉತ್ತರಪ್ರದೇಶ: ಕಲ್ಯಾಣ ಮಂಟಪದಲ್ಲೇ ಮುರಿದು ಬಿದ್ದ ಮದುವೆ

Marriage
Photo Credit :

ಲಖ್ನೋ,ಜ.28 : ವರನ ವರ್ತನೆಯಿಂದ ಅಸಮಾಧಾನಗೊಂಡ ವಧು ಮದುವೆ ದಿನವೇ ವಿವಾಹವಾಗಲು ನಿರಾಕರಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಕೊಟ್ವಾಲಿಯ ನವೀನ್ ಬಸ್ತಿಯಲ್ಲಿ ಈ ಘಟನೆ ನಡೆದಿದೆ.

ವರ್ಮಲಾ ಸಮಾರಂಭದಲ್ಲಿ ವರ ಆಕಾಶ್ ತನಗೆ ನೀಡಿದ್ದ ಹೂವಿನ ಹಾರವನ್ನು ಎಸೆದಿದ್ದರಿಂದ ಮದುವೆ ಮನೆಯಲ್ಲಿ ಕೆಲಕಾಲ ಗದ್ದಲ ಉಂಟಾಗಿದೆ. ಘಟನೆಯ ನಂತರ ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆದಿದೆ.ಇದರಿಂದ ಅಸಮಾಧಾನಗೊಂಡ ವಧು, ತಾನು ಈ ಮದುವೆಯಾಗುವುದಿಲ್ಲ ಎಂದು ವರನನ್ನು ನಿರಾಕರಿಸಿದ್ದಾಳೆ. ವಧುವಿನ ನಿರ್ಧಾರಕ್ಕೆ ಸ್ಥಳದಲ್ಲಿದ್ದ ಜನರು ಬೆಚ್ಚಿಬಿದ್ದಿದ್ದಾರೆ.

ನೆರೆದಿದ್ದ ಜನ, ಸಂಬಂಧಿಕರು ವಧುವನ್ನು ಮದುವೆಯಾಗುವಂತೆ ಸಾಕಷ್ಟು ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ. ಇದಕ್ಕೆ ಕಿವಿಗೊಡದ ವಧು ತನ್ನ ನಿರ್ಧಾರವನ್ನು ಬದಲಾಯಿಸಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು