News Karnataka Kannada
Saturday, May 04 2024
ಉತ್ತರ ಪ್ರದೇಶ

ಉತ್ತರಾಖಂಡದ ಬಸ್ಸು ಕಮರಿಗೆ ಬಿದ್ದು 12 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

Woman killed in accident, son Ashwin and husband critically injured
Photo Credit :

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಅಪಘಾತ ಸಂಭವಿಸಿದೆ. ಇಲ್ಲಿ ಡೆಹ್ರಾಡೂನ್‌ನ ವಿಕಾಸನಗರ ಬಳಿಯ ಬುಲ್ಹಾದ್ ಬೈಲಾ ರಸ್ತೆಯಲ್ಲಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಇದುವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಗ್ರಾಮಸ್ಥರೆಲ್ಲ ಒಂದೇ ಊರಿನವರೆಂದು ಹೇಳಲಾಗುತ್ತಿದೆ. ಅಪಘಾತದ ನಂತರ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳು ತೆರಳಿವೆ ಎಂದು ಚಕ್ರತಾ ಎಸ್‌ಡಿಎಂ ತಿಳಿಸಿದ್ದಾರೆ. ಸದ್ಯ ಸುತ್ತಮುತ್ತಲ ಗ್ರಾಮಸ್ಥರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

ಡೆಹ್ರಾಡೂನ್‌ ಅಪಘಾತಕ್ಕೆ ಓವರ್‌ಲೋಡ್ ಒಂದು ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್ ಚಿಕ್ಕದಾಗಿದ್ದು, ಅದರಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಬಸ್ ಹೊರಡುವ ಮಾರ್ಗದಲ್ಲಿ ಹೆಚ್ಚು ಬಸ್‌ಗಳಿಲ್ಲದ ಕಾರಣ ಒಂದೇ ಬಸ್‌ನಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು