News Karnataka Kannada
Thursday, May 09 2024
ಉತ್ತರ ಪ್ರದೇಶ

ಉತ್ತರ ಪ್ರದೇಶದಲ್ಲಿ ಬಿಜೆಪಿಯು ದ್ವೇಷ, ವಿಭಜನೆಯ ರಾಜಕೀಯ ಮಾಡುತ್ತಿದೆ: ಅಖಿಲೇಶ್ ಯಾದವ್

Akhilesh Yadav
Photo Credit :

ಲಖನೌ: ಬಿಜೆಪಿಯು ಉತ್ತರ ಪ್ರದೇಶದಲ್ಲಿ ದ್ವೇಷ ಮತ್ತು ವಿಭಜನೆಯ ರಾಜಕೀಯ ಮಾಡುತ್ತಿದೆ, ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಟೀಕಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆಗೆ ಭಾನುವಾರ (ಫೆಬ್ರುವರಿ 20) ಮೂರನೇ ಹಂತದ ಮತದಾನದ ವೇಳೆ ಮತ ಚಲಾಯಿಸಿ ಮಾತನಾಡಿರುವ ಅಖಿಲೇಶ್, ಹಲವು ಮತಗಟ್ಟೆಗಳಲ್ಲಿ ಅಸಮರ್ಪಕ ನಿರ್ವಹಣೆ ಕಂಡುಬಂದಿದೆ ಎಂದೂ ಆರೋಪಿಸಿದ್ದಾರೆ.

‘ನಾನು ಇಂದು ಮತ ಚಲಾಯಿಸಿದ್ದೇನೆ. ಮೂರನೇ ಹಂತದ ಮತದಾನದ ವೇಳೆ ವಿವಿಧ ಮತಗಟ್ಟೆಗಳಲ್ಲಿ ಅಸಮರ್ಪಕ ನಿರ್ವಹಣೆಯ ಹಲವು ಪ್ರಕರಣಗಳು ವರದಿಯಾಗಿವೆ. ಮತಯಂತ್ರಗಳು ಕೆಟ್ಟಿರುವ ಬಗ್ಗೆ ಹಲವು ಕಡೆ ದೂರುಗಳು ಬಂದಿವೆ. ಆದಾಗ್ಯೂ,  ಬಿಜೆಪಿಯು ದ್ವೇಷದ ರಾಜಕಾರಣ ಮಾಡುತ್ತಿದ್ದು, ಜನರನ್ನು ವಿಭಜಿಸುತ್ತಿದೆ’ ಎಂದು ದೂರಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರುವರಿ 20ರಂದು ಮೂರನೇ ಹಂತದ ಮತದಾನ ನಡೆದಿದೆ. 16 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಶೇ 61.02ರಷ್ಟು ಮಂದಿ ಮತ ಚಲಾಯಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು