ಉತ್ತರಪ್ರದೇಶ: ರೂಪಾಂತರಿ ಓಮಿಕ್ರಾನ್ ಹಾಗೂ ಕೊರೋನಾ ವೈರಸ್ ಹೆಚ್ಚಳದ ನಿಯಂತ್ರಣಕ್ಕಾಗಿ ಉತ್ತರ ಪ್ರದೇಶ ಸರ್ಕಾರ ,ಒಮೈಕ್ರಾನ್ ಕೊರೊನಾ ವೈರಸ್ ರೂಪಾಂತರದ ಹರಡುವಿಕೆಯ ಬಗ್ಗೆ ಹೆಚ್ಚುತ್ತಿರುವ ಕಳವಳದ ನಡುವೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ನಾಳೆಯಿಂದ ಜಾರಿಗೆ ಬರುವಂತೆ ನೈಟ್ ಕರ್ಪ್ಯೂ ಜಾರಿಗೊಳಿಸಿದೆ.
ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥನ್ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದ್ದು . ನಾಳೆ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿಗೊಳ್ಳಲಿದೆ ಎಂಬುದಾಗಿ ತಿಳಿಸಿದೆ.
ಅಂದಹಾಗೇ, ಮಧ್ಯಪ್ರದೇಶದ ನಂತರ, ರಾತ್ರಿ-ಸಮಯದ ಚಲನೆನಿರ್ಬಂಧಗಳನ್ನು ಹೇರಿದ ಎರಡನೇ ರಾಜ್ಯ ಉತ್ತರ ಪ್ರದೇಶವಾಗಿದೆ. ನಾಳೆ ರಾತ್ರಿಯಿಂದಲೇ ಉತ್ತರ ಪ್ರದೇಶದಲ್ಲಿ ನೈಟ್ ಕರ್ಪ್ಯೂ ಜಾರಿಗೊಳ್ಳಲಿದ್ದು, ಕೊರೋನಾ ಹೆಚ್ಚಳಕ್ಕೆ ನಿಯಂತ್ರಣ ಹಾಕೋ ಸಲುವಾಗಿ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.