News Karnataka Kannada
Thursday, May 02 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ಕೊಳದಲ್ಲಿ ಸ್ನಾನಕ್ಕಿಳಿದಿದ್ದ ಬಾಲಕ ಮೊಸಳೆಗೆ ಬಲಿ

Police in Mulubagil emptying a lake to investigate 8 years old murder case
Photo Credit :

ಉತ್ತರ ಪ್ರದೇಶ: ಕೊಳದಲ್ಲಿ ಸ್ನಾನ ಮಾಡಲು ಹೋದ ಎಂಟು ವರ್ಷದ ಬಾಲಕ ಮೊಸಳೆಗೆ ಆಹಾರವಾಗಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದ್ದು, ಬಾಲಕನ ಛಿದ್ರಛಿದ್ರಗೊಂಡ ಮೃತದೇಹ ಭಾನುವಾರ ಸಿಕ್ಕಿದೆ.

ಬಾಲಕ ತನ್ನ ಸಹೋದರಿಯೊಂದಿಗೆ ಕೊಳದಲ್ಲಿ ಸ್ನಾನ ಮಾಡಲು ತೆರಳಿದ್ದಾನೆ. ಈ ಇಬ್ಬರು ಮಕ್ಕಳು ನೀರಿನಲ್ಲಿ ಆಟವಾಡುತ್ತಾ ಕಾಲ ಕಳೆಯುತ್ತಿದ್ದರು. ಇದ್ದಕ್ಕಿದ್ದಂತೆ ರಕ್ಕಸ ಗಾತ್ರದ ಮೊಸಳೆ ಬಾಲಕನ ಮೇಲೆ ದಾಳಿ ನಡೆಸಿದೆ. ಅಷ್ಟೇ ಅಲ್ಲ, ಅವನನ್ನು ಹೊತ್ತೊಯ್ದಿದೆ.

ಸಹೋದರಿ ಓಡಿ ಹೋಗಿ ಪೋಷಕರಿಗೆ ಘಟನೆಯನ್ನು ವಿವರಿಸಿದ್ದಾಳೆ. ಕೂಡಲೇ ಪೋಷಕರು ಪೊಲೀಸ್ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬಾಲಕನ ಪತ್ತೆ ಕಾರ್ಯ ನಡೆಸಿದರು. ಆದರೆ, ಬಾಲಕನ ಪ್ರಾಣ ಉಳಿಸಲು ಅವರಿಂದ ಸಾಧ್ಯವಾಗಿಲ್ಲ. ಕಾರ್ಯಾಚರಣೆ ನಡೆಸುವ ವೇಳೆಗೆ ಮೊಸಳೆ ಆತನ ಜೀವ ತಿಂದಿತ್ತು. ಬಾಲಕನ ಮೃತದೇಹ ಭಾನುವಾರ ಬೆಳಗ್ಗೆ ವೇಳೆಗೆ ಪತ್ತೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು