News Karnataka Kannada
Thursday, May 02 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ಪತ್ನಿಯ ಚಿತೆಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಪತಿ

3 killed in fire in Uttar Pradesh
Photo Credit : IANS

ಉತ್ತರ ಪ್ರದೇಶ : ಮಹೋಬಾ ಜಿಲ್ಲೆಯ ಕುಲ್ಪಹಾಡ್ ಕೊಟ್ವಾಲಿ ಪ್ರದೇಶದ ಜೈತ್‌ಪುರ ಗ್ರಾಮದಲ್ಲಿ ಭಯಾನಕ ಘಟನೆ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ತನ್ನ ಪತ್ನಿಯ ಚಿತೆಗೆ ಹಾರಿ, ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.

ಆತ್ಮಹತ್ಯೆ ಯತ್ನಿಸಿದ ವ್ಯಕ್ತಿಯನ್ನು ಬ್ರಿಜೇಶ್ ಎಂದು ಗುರುತಿಸಲಾಗಿದೆ. ಜೈತ್‌ಪುರ ಗ್ರಾಮದ ನಿವಾಸಿಯಾದ ಈತ ತನ್ನ ಪತ್ನಿ ಉಮಾ ಎಂಬಾಕೆ ಜೊತೆ ವಾಸಿಸುತ್ತಿದ್ದ. ಪತ್ನಿ ಉಮಾ ನಿನ್ನೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆಯ ಅಂತ್ಯಸಂಸ್ಕಾರ ಮಾಡುತ್ತಿದ್ದಾಗ ಆಕೆ ಚಿತೆ ಮೇಲೆ ಹಾರಿದ ಬ್ರಿಜೇಶ್, ತಾನೂ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ.

ಇನ್ನು ಪತಿ ಬ್ರಿಜೇಶ್ ಹಾಗೂ ಪತ್ನಿ ಉಮಾ ನಡುವೆ ಮೊನ್ನೆ ರಾತ್ರಿ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿದೆ. ಆಕೆ 5 ಸಾವಿರ ಹಣ ಕೊಡುವಂತೆ ಪತಿಗೆ ಕೇಳಿದ್ದಾಳೆ. ಅದಕ್ಕೆ ಪತ್ನಿಗೆ ಹಣ ಕೊಡಲು ಬ್ರಿಜೇಶ್ ನಿರಾಕರಿಸಿದ್ದಾನೆ. ಇದೇ ಕಾರಣಕ್ಕೆ ಕೋಪಗೊಂಡ ಉಮಾ ಆತ್ಮಹತ್ಯೆಗೆ ಶರಣಾಗಿದ್ದಳು. ರಾತ್ರಿಯೇ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಉಮಾ ಅಂತ್ಯಸಂಸ್ಕಾರಕ್ಕೆ ಮನೆಯವರು ಸಿದ್ಧತೆ ನಡೆಸಿದ್ದಾರೆ. ಆಗ ಆಕೆಯ ಚಿತೆಗೆ ಬೆಂಕಿ ಇಡುತ್ತಿದ್ದಂತೆ ಬ್ರಿಜೇಶ್ ಕೂಡ ಉರಿಯುತ್ತಿರುವ ಬೆಂಕಿಗೆ ಹಾರಿದ್ದಾನೆ. ಕೂಡಲೇ ಕುಟುಂಬಸ್ಥರು, ಸ್ಥಳೀಯರು ಆತನನ್ನು ರಕ್ಷಿಸುವ ಹೊತ್ತಿಗೆ ಅತನ ದೇಹದ ಕೆಲವು ಭಾಗಗಳು ಸುಟ್ಟಿದ್ದವಂತೆ. ನಂತರ ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ಶಾಕ್‌ಗೆ ಒಳಗಾದ ಪತಿ ಬ್ರಿಜೇಶ್ ಖಿನ್ನತೆಗೆ ಒಳಗಾಗಿದ್ದಾನೆ. ಆಕೆಯ ನಿಧನದ ನಂತರ ತನಗೆ ಬದುಕಲು ಇಷ್ಟವಿಲ್ಲ ಎಂದು ಬ್ರಿಜೇಶ್ ಈ ರೀತಿ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.

ಇನ್ನು ವರದಕ್ಷಿಣೆಗಾಗಿ ಉಮಾಳನ್ನು ಆಕೆಯ ಪತಿ ಮತ್ತು ಅತ್ತೆಯವರೇ ಕೊಂದಿದ್ದಾರೆ ಎಂದು ಉಮಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ಆಗಿಲಿ ಅಂತ ಆಗ್ರಹಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ನಮ್ಮ ಮಗಳ ಆತ್ಮಕ್ಕೆ ಶಾಂತಿ ಕೊಡಿಸಿ, ಅವಳ ಸಾವಿಗೆ ನ್ಯಾಯ ಕೊಡಿಸಿ ಅಂತ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು