News Karnataka Kannada
Thursday, May 09 2024
ಉತ್ತರ ಪ್ರದೇಶ

ಉತ್ತರ ಪ್ರದೇಶ : ಹಸುಗಳಿಗೆ ಆಂಬ್ಯುಲೆನ್ಸ್ ಸೇವೆ

Cow
Photo Credit :

ತೀವ್ರವಾಗಿ ಅಸ್ವಸ್ಥಗೊಂಡಿರುವ ಹಸುಗಳಿಗೆ ಆಂಬ್ಯುಲೆನ್ಸ್ ಸೇವೆ ಆರಂಭಿಸುವ ಮಹತ್ವದ ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.

ಈ ಬಗ್ಗೆ ರಾಜ್ಯ ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಲಕ್ಷ್ಮೀ ನಾರಾಯಣ ಚೌಧರಿ ಮಾಹಿತಿ ನೀಡಿದ್ದು, “112 ತುರ್ತು ಸೇವಾ ಸಂಖ್ಯೆ  ಈ ಹೊಸ ಆಂಬ್ಯುಲೆನ್ಸ್ ಸೇವೆಯು ಅಸ್ವಸ್ಥಗೊಂಡ ಹಸುಗಳಿಗೆ ತ್ವರಿತ ಚಿಕಿತ್ಸೆಗೆ ದಾರಿಯಾಗಲಿದೆ” ಎಂದು ಹೇಳಿದ್ದಾರೆ.

ಈಗಾಗಲೇ ಈ ಹೊಸ ಯೋಜನೆಗೆ 515 ಆಂಬ್ಯುಲೆನ್ಸ್‌ಗಳು ಸಿದ್ಧವಾಗಿದ್ದು, ಬಹುಶಃ ಇಂತಹದೊಂದು ಮಹತ್ವದ ಯೋಜನೆ ದೇಶದಲ್ಲೇ ಮೊದಲನೆಯದು ಎಂದು ಸಚಿವರು ಹೇಳಿದ್ದಾರೆ.

ಸೇವೆಯನ್ನು ಕೋರಿ ʼ112ʼಕ್ಕೆ ಕರೆ ಮಾಡಿದ 15 ರಿಂದ 20 ನಿಮಿಷಗಳಲ್ಲಿ ಪಶುವೈದ್ಯರು ಮತ್ತು ಇಬ್ಬರು ಸಹಾಯಕರೊಂದಿಗೆ ಆಂಬ್ಯುಲೆನ್ಸ್ ಮನೆ ಬಾಗಿಲಿಗೆ ಬರಲಿದೆ. ಈ ಯೋಜನೆಯು ಡಿಸೆಂಬರ್‌ ನಲ್ಲಿ ಆರಂಭವಾಗಲಿದೆ. ಹಾಗೆಯೇ ದೂರುಗಳನ್ನು ಸ್ವೀಕರಿಸಲು ಲಕ್ನೋದಲ್ಲಿ ಕಾಲ್ ಸೆಂಟರ್ ಕೂಡ ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ʼರಾಜ್ಯದಲ್ಲಿ ಉಚಿತವಾಗಿ ಉತ್ತಮ ಗುಣಮಟ್ಟದ ವೀರ್ಯ ಮತ್ತು ಭ್ರೂಣ ಕಸಿ ತಂತ್ರಜ್ಞಾನವನ್ನು ಒದಗಿಸುವುದರೊಂದಿಗೆ ಉನ್ನತ ಮಟ್ಟದ ತಳಿ ಸುಧಾರಣೆ ಕಾರ್ಯಕ್ರಮಕ್ಕೆ ಉತ್ತೇಜನ ಸಿಗಲಿದ್ದು,  ಬರಡಾದ ಹಸುಗಳನ್ನೂ ಹೆಚ್ಚು ಹಾಲು ನೀಡುವ  ಹಸುವಾಗಿ ಪರಿವರ್ತಿಸುವ ತಂತ್ರಜ್ಞಾನವು  ರಾಜ್ಯದಲ್ಲಿ ಕಾಲಿಡಲಿದೆ. ಈಗಾಗಲೇ ಮಥುರಾ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕ ಯೋಜನೆಯಾಗಿ ಈ ಯೋಜನೆ ಆರಂಭವಾಗಲಿದೆ ಎಂದು ಸಚಿವ ಚೌಧರಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು