News Karnataka Kannada
Tuesday, April 30 2024
ಉತ್ತರ ಪ್ರದೇಶ

ಉದ್ಯಮಿ ಸಾವು ; 6 ಮಂದಿ ಪೊಲೀಸರ ವಿರುದ್ಧ ಎಫ್ಐಆರ್

Checkpost Dharmastala 10072021
Photo Credit :

ಲಕ್ನೋ: ಗೋರಖ್ ಪುರ್ ದಾಳಿ ಪ್ರಕರಣದಲ್ಲಿ ಕಾನ್ಪುರ ಮೂಲದ ಉದ್ಯಮಿ ಸಾವನ್ನಪ್ಪಿದ ಕೇಸ್ ಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಕಾನೂನು ಸಚಿವ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಪ್ರಕರಣ ನಡೆದಿದ್ದು, ದುರಾದೃಷ್ಟ ಎಂದು ಹೇಳಿದ್ದಾರೆ. ಅಮಾನತುಗೊಂಡಿರುವ ಆರು ಮಂದಿ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ತ್ವರಿತ ನ್ಯಾಯಾಲಯಕ್ಕೆ ಕೊಂಡೊಯ್ಯಲಾಗುವುದು ಎಂದು ಭರವಸೆ ನೀಡಿದ ಅವರು , ಆತ  ಪೋಲೀಸ್ ಆಗಿರಲಿ ಅಥವಾ ಉನ್ನತ ಹುದ್ದೆಯಲ್ಲಿರಲಿ, ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು  ಪಾಠಕ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಉದ್ಯಮಿ ಮನೀಶ್ ಗುಪ್ತಾ ಅವರ ಮುಖ, ತಲೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿತ್ತು. ಸೆಪ್ಟೆಂಬರ್ 28 ರಂದು ಗೋರಖ್‌ಪುರದ ಹೋಟೆಲ್‌ನಲ್ಲಿ ನಡೆಸಿದ ದಾಳಿಯಲ್ಲಿ ಗುಪ್ತಾ ಸಾವನ್ನಪ್ಪಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು