News Karnataka Kannada
Sunday, May 12 2024
ಉತ್ತರ ಪ್ರದೇಶ

ಕಾಣೆಯಾಗಿದ್ದ ಬಾಲಕಿ ಮೃತದೇಹ ಆಶ್ರಮದೊಳಗಿನ ಕಾರಿನಲ್ಲಿ ಪತ್ತೆ

Crime.
Photo Credit :

ಗೊಂಡಾ:  ಉತ್ತರ ಪ್ರದೇಶದ ಗೊಂಡಾದಲ್ಲಿರುವ ದೇವಮಾನವ ಅಸಾರಾಂ ಬಾಪು ಅವರ ಆಶ್ರಮದೊಳಗೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ನಾಲ್ಕು ದಿನಗಳಿಂದ ಕಾಣೆಯಾಗಿದ್ದ ಬಾಲಕಿಯ ಮೃತದೇಹವು  ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ನಾಲ್ಕು ದಿನಗಳ ಹಿಂದೆ ಬಾಲಕಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು ಮತ್ತು ಈಗ ಆಕೆಯ ದೇಹವು ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರ ಆಶ್ರಮದಲ್ಲಿ ಕಾರಿನೊಳಗೆ ಪತ್ತೆಯಾಗಿದೆ.

ಮೃತದೇಹದ ಬಗ್ಗೆ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಾರಿನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಆಶ್ರಮದ ಸಿಬ್ಬಂದಿ ಕಾರಿನ ಬಾಗಿಲು ತೆರೆದಾಗ ಶವ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ದುರ್ವಾಸನೆ ಬಂದ ಬಳಿಕ ಆಶ್ರಮದ ಕಾವಲುಗಾರ ಕಾರನ್ನು ತೆರೆದು ಶವವನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮತ್ತು ವಿಧಿವಿಜ್ಞಾನ ತಂಡವು ಆಶ್ರಮ ಮತ್ತು ವಾಹನವನ್ನು ತನಿಖೆ ನಡೆಸುತ್ತಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಕಾರಿನ ಸಮೇತ ಇಡೀ ಆಶ್ರಮವನ್ನು ಸೀಲ್ ಮಾಡಿ ತನಿಖೆ ಆರಂಭಿಸಿದ್ದಾರೆ. ಬಾಲಕಿಯನ್ನು ಕೊಂದು ಶವವನ್ನು ಮರೆಮಾಚಲು ಯತ್ನಿಸಿದಂತೆ ತೋರುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬರುತ್ತಿದೆ ಪೊಲೀಸರು ತಿಳಿಸಿದ್ದಾರೆ. ನಗರ ಕೊತ್ವಾಲಿ ಪ್ರದೇಶದ ಬಿಮಾರ್ ಗ್ರಾಮದಲ್ಲಿರುವ ಅಸಾರಾಂ ಬಾಪು ಅವರ ಆಶ್ರಮದಲ್ಲಿ ಕಳೆದ ಹಲವು ದಿನಗಳಿಂದ ಈ ಕಾರನ್ನು ನಿಲ್ಲಿಸಲಾಗಿತ್ತು.

2013ರಲ್ಲಿ ಜೋಧ್ ಪುರ ಆಶ್ರಮದಲ್ಲಿ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ದೇವಮಾನವ ಅಸಾರಾಂ ಬಾಪು ಅತ್ಯಾಚಾರ ಅವರನ್ನು ತಪ್ಪಿತಸ್ಥನೆಂದು ಪರಿಗಣಿಸಿ 2018ರಲ್ಲಿ, ಜೋಧ್ ಪುರದ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು