ಉತ್ತರ ಪ್ರದೇಶ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಪವರ್ ಕಟ್ ಮಾಡುತ್ತೇನೆ, ವಿದ್ಯುತ್ ಕಂಬ ಹತ್ತಿ ಸಮಸ್ಯೆ ಬಗೆಹರಿಸು ಎಂದು ಹೇಳಿದ ಹಿರಿಯ ಅಧಿಕಾರಿಯು ಪವರ್ ಕಟ್ ಮಾಡದ ಕಾರಣ ಕಂಬ ಹತ್ತಿದ ಲೈನ್ಮ್ಯಾನ್ ವಿದ್ಯುತ್ ಶಾಖ್ನಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಬರ್ರಾ ಪ್ರದೇಶದ ನಿವಾಸಿಯಾಗಿರುವ ಲಖನ್ ದ್ವಿವೇದಿ ಅವರು ಮೃತ ಲೈನ್ಮ್ಯಾನ್ ಆಗಿದ್ದಾರೆ.ಫೆಬ್ರವರಿ 27ರಂದು ಬರ್ರಾ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದ್ದು, ಲಖನ್ ದ್ವಿವೇದಿ ಅವರಿಗೆ ಮಾಹಿತಿ ಲಭ್ಯವಾಗಿದೆ. ಅದರಂತೆ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ, ನಾನು ಕಂಬ ಹತ್ತಿ ಪರಿಶೀಲಿಸುತ್ತೇನೆ ಎಂದಿದ್ದಾರೆ. ಇದಕ್ಕೆ ಹಿರಿಯ ಅಧಿಕಾರಿಗಳೂ ಒಪ್ಪಿದ್ದಾರೆ.
ಹಿರಿಯ ಅಧಿಕಾರಿಗಳು ಪವರ್ ಕಟ್ ಮಾಡಿದ್ದಾರೆ ಎಂದು ಕಂಬ ಹತ್ತಿದ ಲೈನ್ಮ್ಯಾನ್ಗೆ ವಿದ್ಯುತ್ ತಗುಲಿದ್ದು, ಶಾಕ್ನಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 2ರಂದು ಮೃತಪಟ್ಟಿದ್ದಾರೆ.
ಲಖನ್ ದ್ವಿವೇದಿ ಮೃತಪಡುವ ಮುನ್ನ ವಿಡಿಯೊ ಹೇಳಿಕೆಯೊಂದನ್ನು ನೀಡಿದ್ದು, ”ಹಿರಿಯ ಅಧಿಕಾರಿಗಳು ಪವರ್ ಕಟ್ ಮಾಡುತ್ತೇನೆ ಎಂದು ಹೇಳಿದ್ದರಾದರೂ ಕಟ್ ಮಾಡಿಲ್ಲ. ಹಾಗಾಗಿ ನನಗೆ ವಿದ್ಯುತ್ ತಗುಲಿದೆ,” ಎಂದು ಹೇಳಿದ್ದಾರೆ.
ಇನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಲಖನ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ದೂರು ದಾಖಲಿಸಿದ್ದಲ್ಲದೆ, ನಿರ್ಲಕ್ಷ್ಯ ವಹಿಸಿದ ಅಧಿಕಾರಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಜತೆಗೆ 20 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸಹ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…