ಲಕ್ನೋ : ಕಾಶ್ಮೀರ ಪಂಡಿತರ ಕುರಿತಾದ `ದಿ ಕಾಶ್ಮೀರ್ ಫೈಲ್ಸ್’ ಚಿತ್ರ ತಯಾರಿಸಬಹುದಾದರೆ `ಲಖೀಂಪುರ್ ಫೈಲ್ಸ್’ ಚಿತ್ರ ಕೂಡ ನಿರ್ಮಿಸಬಹುದಾಗಿದೆ ಎಂದು ಹೇಳಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು ವ್ಯಂಗ್ಯವಾಡಿದ್ದಾರೆ.
“ಕಾಶ್ಮೀರ್ ಫೈಲ್ಸ್ ಎಂಬ ಚಿತ್ರ ತಯಾರಿಸಲಾಗಿದೆಯಾದರೆ, ವಾಹನವೊಂದನ್ನು ರೈತರ ಮೇಲೆ ಹರಿಸಲಾದ ಲಖೀಂಪುರ್ ಘಟನೆ ಕುರಿತಂತೆ ಕನಿಷ್ಠ `ಲಖೀಂಪುರ್ ಫೈಲ್ಸ್’ ಎಂಬ ಚಿತ್ರವೂ ತಯಾರಾಗಬೇಕು” ಎಂದು ಸೀತಾಪುರ್ ಜಿಲ್ಲೆಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್ ಹೇಳಿದ್ದಾರೆ.
ಅಕ್ಟೋಬರ್ 3, 2021ರಂದು ನಡೆದ ಘಟನೆಯಲ್ಲಿ ಕೇಂದ್ರ ಸಚಿವ ಅಜಯ್ ಮೌರ್ಯ ಅವರ ಪುತ್ರನಿಗೆ ಸೇರಿದ ವಾಹನವೊಂದು ರೈತರ ಮೇಲೆ ಹರಿದು ಕನಿಷ್ಠ ನಾಲ್ಕು ಮಂದಿ ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
ವಿಧಾನಸಭಾ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು “ಸಮಾಜವಾದಿಗಳು ನೈತಿಕ ಗೆಲುವನ್ನು ಸಾಧಿಸಿದ್ದಾರೆ. ನಮ್ಮ ಪಕ್ಷ ಮೇಲೇರುತ್ತಿದೆ ಬಿಜೆಪಿ ಕೆಳಗಿಳಿಯುತ್ತಿದೆ” ಎಂದು ಹೇಳಿದರು.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…
ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…