News Karnataka Kannada
Sunday, April 28 2024
ಉತ್ತರ ಪ್ರದೇಶ

ಕ್ಲಿನಿಕ್‌ನಲ್ಲಿದ್ದ ವೈದ್ಯನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : IANS

ಲಕ್ನೊ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬುಲಂದ್‌ಶಹರ್ ನಗರದ ಗುಲಾಥಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಕೆಟ್‌ನಲ್ಲಿ ರವಿವಾರ ಅಪರಿಚಿತ ದುಷ್ಕರ್ಮಿಗಳು ವೈದ್ಯರೊಬ್ಬರನ್ನು ಅವರ ಕ್ಲಿನಿಕ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.

ಡಾ. ಶಾದಾಬ್ ಎಂದು ಗುರುತಿಸಲಾದ ವೈದ್ಯರು ಕಳೆದ 16 ವರ್ಷಗಳಿಂದ ಚರ್ಮರೋಗ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಬುಲಂದ್‌ಶಹರ್ ಎಸ್‌ಎಸ್‌ಪಿ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಡಾ. ಶಾದಾಬ್ ಅವರ ಕ್ಲಿನಿಕ್‌ಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ದುಷ್ಕರ್ಮಿಗಳು ವೈದ್ಯರ ಮೇಲೆ ಸುಮಾರು 30 ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಶಾದಾಬ್‌ಗೆ 24 ಗುಂಡುಗಳು ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗುಂಡಿನ ಚಕಮಕಿಯ ನಂತರ ಮಾರುಕಟ್ಟೆಯಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. ಗುಂಡಿನ ದೊಡ್ಡ ಶಬ್ದ ಕೇಳಿದ ಜನರು ಕಿರುಚಿಕೊಂಡು ಓಡಲು ಆರಂಭಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು