ಉತ್ತರ ಪ್ರದೇಶ

ಗೋರಖ್‌ಪುರ: ದೋಣಿ ಮುಳುಗಿ ಮೂರು ಮಂದಿ ಸಾವು

ಗೋರಖ್‌ಪುರ : ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಗಂಡಕ್‌ ನದಿಯಲ್ಲಿ ದೋಣಿಯೊಂದು ಮುಳುಗಿ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ (ಎ.13) ನಡೆದಿದೆ.

ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಏಳು ಮಂದಿಯನ್ನು ರಕ್ಷಿಸಲಾಗಿದೆ ಎಂದು ಕುಶಿನಗರದ ಪೊಲೀಸ್‌ ವರಿಷ್ಠಾಧಿಕಾರಿ ಸಚೀಂದ್ರ ಪಟೇಲ್‌ ತಿಳಿಸಿದ್ದಾರೆ. ಮೃತರಾದ ಅಸ್ಮಾ ಖಾತೂನ್‌(38),ಗುಡಿಯಾ(17)ಮತ್ತು ಸೋನಿ(16)ಎಂದು ಗುರುತಿಸಲಾಗಿದ್ದು, ಎಲ್ಲರೂ ಪನಿಯಾಹ್ವಾ ಪ್ರದೇಶದವರಾಗಿದ್ದಾರೆ.

10 ಜನರು ದೋಣಿಯಲ್ಲಿ ನದಿಯ ದಡದಾಚೆ ಹೊಲಯೊಂದರಲ್ಲಿ ಗೋಧಿ ಕೊಯ್ಲಿಗೆ ಹೋಗುತ್ತಿದ್ದಾಗ ನೀರಿನ ರಭಸಕ್ಕೆ ದೋಣಿ ಮುಗುಚಿ ಬಿದ್ದಿರುವುದರಿಂದ ಈ ದುರ್ಘ‌ಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನದಿ ದಾಟಲು ಜನರಿಗೆ ಅನುಮತಿ ಇಲ್ಲದಿದ್ದರೂ ಕೃಷಿ ಕಾರ್ಯಕ್ಕಾಗಿ ಇಲ್ಲಿನ ಜನರು ದೋಣಿಗಳನ್ನು ಬಳಸುತ್ತಾರೆ ಎಂದ ಪೊಲೀಸ್‌ ವರಿಷ್ಠಾಧಿಕಾರಿ. ಘಟನೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತೇವೆ ಮತ್ತು ಜೀವನೋಪಾಯಕ್ಕೆ ಸಂಬಂಧಿಸಿದ ಪರಿಹಾರವನ್ನು ಕಂಡು ಹಿಡಿಯಲು ನಾವು ಸರಕಾರಕ್ಕೆ ಕೆಲವು ಸಲಹೆಗಳನ್ನು ಕಳುಹಿಸುತ್ತೇವೆ ಎಂದು ಹೇಳಿದರು.

ಸಂತಾಪ:
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಟ್ವೀಟರ್‌ ನಲ್ಲಿ ಮೂವರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Gayathri SG

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

1 min ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

7 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

22 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

38 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago