ಲಕ್ನೊ : ಇದೇ ಮೊದಲ ಬಾರಿ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಶುಕ್ರವಾರ ಗೋರಖ್ ಪುರ ಕ್ಷೇತ್ರದಿಂದ ಸ್ಪರ್ಧಿಸಲು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಉತ್ತರಪ್ರದೇಶ ಚುನಾವಣೆಯ ಹೋರಾಟದಲ್ಲಿ ಮೊದಲ ಹೆಜ್ಜೆ ಇಡುವ ಮೊದಲು ಗೋರಖ್ ನಾಥ್ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಆದಿತ್ಯನಾಥ್ ಅವರು ತಮ್ಮ ಭದ್ರಕೋಟೆ ಪೂರ್ವ ಉತ್ತರಪ್ರದೇಶದಲ್ಲಿರುವ ಗೋರಖ್ ಪುರದಲ್ಲಿ ಇಂದು ನಾಮಪತ್ರ ಸಲ್ಲಿಸುವ ವೇಳೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಹಲವು ಬಿಜೆಪಿ ನಾಯಕರು ಸಾಥ್ ನೀಡಿದರು.
ಚುನಾವಣಾ ಕಚೇರಿಗೆ ತೆರಳುವ ಮೊದಲು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು ಆದಿತ್ಯನಾಥ್ ಅವರನ್ನು ಹೊಗಳಿದರು.