News Karnataka Kannada
Saturday, May 04 2024
ದೆಹಲಿ

ಜ್ಞಾನವಾಪಿ ಮಸೀದಿಯಲ್ಲಿ ನಮಾಜ್‌ಗೆ ಅಡ್ಡಿಯಾಗಬಾರದು: ಸುಪ್ರೀಂಕೋರ್ಟ್‌

ಸುಪ್ರೀಂ ಕೋರ್ಟ್ ಗೆ 75 ವರ್ಷದ ಸಂಭ್ರಮಾಚರಣೆಯ ಮಹೋತ್ಸವದ ಕಾರ್ಯಕ್ರಮವನ್ನು ಇಂದು (ಜ.28) ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.
Photo Credit : IANS

ನವದೆಹಲಿ/ಲಕ್ನೋ, ಮೇ.18: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಶಿವಲಿಂಗ ಪತ್ತೆಯಾಗಿರುವ ಪ್ರದೇಶವನ್ನು ರಕ್ಷಿಸಬೇಕು. ಆದರೆ, ಮುಸ್ಲಿಮರು ನಮಾಜ್ ಮಾಡುವುದಕ್ಕೆ ಮಸೀದಿಗೆ ಬರಲು ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ವಾರಣಾಸಿ ಮ್ಯಾಜಿಸ್ಟ್ರೇಟ್‌ಗೆ ತಿಳಿಸಿದೆ.

ಮಸೀದಿಯಲ್ಲಿ ನಿಖರವಾಗಿ ಯಾವ ಕಡೆ ಶಿವಲಿಂಗ ಪತ್ತೆಯಾಗಿದೆ ಎಂಬುದನ್ನು ತಿಳಿಸಿ ಎಂದು ವಾರಣಾಸಿ ಆಡಳಿತವನ್ನು ಕೇಳಿರುವ ಸುಪ್ರೀಂ ಕೋರ್ಟ್, ಆ ಪ್ರದೇಶವನ್ನು ರಕ್ಷಿಸಬೇಕು ಎಂದು ಮಂಗಳವಾರ ಹೇಳಿದೆ.

ಮಸೀದಿ ಸಂಕೀರ್ಣದ ಚಿತ್ರೀಕರಣವನ್ನು ನಿಲ್ಲಿಸುವಂತೆ ವಾರಣಾಸಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ಪಿ.ಎಸ್. ನರಸಿಂಹ ಅವರಿದ್ದ ನ್ಯಾಯಪೀಠವು ಜಿಲ್ಲಾಡಳಿತವನ್ನು ಪ್ರಶ್ನಿಸಿದೆ. “ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ?” ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಕೇಳಿದರು.

“ನಾವು ವರದಿಯನ್ನು ನೋಡಿಲ್ಲ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಉತ್ತರಿಸಿದರು ಮತ್ತು ಹೆಚ್ಚಿನ ಮಾಹಿತಿಗಳೊಂದಿಗೆ ಹಾಜರಾಗಲು ನಾಳೆಯವರೆಗೆ ಕಾಲಾವಕಾಶ ಕೋರಿದರು.

‘ನಮಾಜ್ ಮಾಡಲು (ಪ್ರಾರ್ಥನೆ) ಬಂದವರು ತಮ್ಮ ಪಾದಗಳಿಂದ ಸ್ಪರ್ಶಿಸಬಾದರೆಂದು, ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ಶಿವಲಿಂಗ’ ಪತ್ತೆಯಾದ ಸ್ಥಳದಲ್ಲಿ ನಿರ್ಬಂಧ ವಿಧಿಸಲಾಗಿದೆ. ಶಿವಲಿಂಗವು ಕೊಳದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಈ ಕೊಳವನ್ನು ನಮಾಜ್‌ಗೆ ಮುನ್ನ ‘ವಾಜೂ’ ಅಥವಾ ಶುದ್ಧೀಕರಣದ ಆಚರಣೆಗಳಿಗೆ ಬಳಸಲಾಗುತ್ತಿದೆ ಎಂದು ಮೆಹ್ತಾ ಮಾಹಿತಿ ನೀಡಿದರು.

ಕಾಶಿ ವಿಶ್ವನಾಥ ಮಂದಿರದ ಸಮೀಪದಲ್ಲಿ ಇರುವ ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಕೊಳದ ಹತ್ತಿರ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಕಕ್ಷಿದಾರರ ಪರ ವಕೀಲ ಮದನ್‌ ಮೋಹನ್‌ ಯಾದವ್‌ ಹೇಳಿಕೆ ನೀಡಿದ ಬೆನ್ನಲ್ಲೇ, ಸ್ಥಳೀಯ ನ್ಯಾಯಾಲಯ ಆ ಜಾಗವನ್ನು ಸೀಲ್ ಮಾಡುವಂತೆ ಆದೇಶ ನೀಡಿತ್ತು. ಮಸೀದಿಯ ಹಿಂದಿರುವ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಪ್ರವೇಶ ಕೋರಿ ಸಲ್ಲಿಸಿದ್ದ ಮನವಿಯ ನಂತರ ನ್ಯಾಯಾಲಯದ ಆದೇಶದ ಮೇರೆಗೆ ಮಸೀದಿ ಸಂಕೀರ್ಣದಲ್ಲಿ ನಡೆದ ಚಿತ್ರೀಕರಣದ ಸಂದರ್ಭದಲ್ಲಿ “ಶಿವಲಿಂಗ” ಕಂಡುಬಂದಿದೆ ಎಂದು ಹೇಳಲಾಗಿದೆ.

ಚಿತ್ರೀಕರಣದ ಸಂದರ್ಭದಲ್ಲಿ ಸಿಕ್ಕಿದ ವಸ್ತುವು ಕಾರಂಜಿಯ ಬಿಡಿಭಾಗವೇ ಹೊರತು ಶಿವಲಿಂಗವಲ್ಲ ಎಂದು ಮಸೀದಿಯ ಆಡಳಿತ ಮಂಡಳಿ ತಿಳಿಸಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಮುಸ್ಲಿಂ ಅರ್ಜಿದಾರರು, ಸಂಕೀರ್ಣದ ಸಮೀಕ್ಷೆ ನಡೆಸಿದ ಸಮಿತಿಯ ವರದಿಯನ್ನು ಇನ್ನೂ ಸಲ್ಲಿಸದಿರುವಾಗ ಸಿಟಿ ಕೋರ್ಟ್ ಆ ಸ್ಥಳವನ್ನು ಸೀಲ್ ಮಾಡಲು ಹೇಗೆ ಆದೇಶಿಸಿತು ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು