ಲಕ್ನೋ : ನಮ್ಮ ಕೈಲಾದಷ್ಟು ಹೋರಾಡಿದೆವು, ನಾವು ಫಲಿತಾಂಶಗಳನ್ನು ಕಾದು ನೋಡುತ್ತೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಚುನಾವಣೋತ್ತರ ಸಮೀಕ್ಷೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಲಕ್ನೋದಲ್ಲಿ ಪಕ್ಷದ ವತಿಯಿಂದ ‘ಲಡ್ಕಿ ಹೂ, ಲಾಡ್ ಸಕ್ತಿ ಹೂ’ ಅಭಿಯಾನದ ಅಡಿಯಲ್ಲಿ ಮೆರವಣಿಗೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಮ್ಮ 159 ಮಹಿಳಾ ಅಭ್ಯರ್ಥಿಗಳೆಲ್ಲರೂ ಹೋರಾಡಿದ್ದು ದೊಡ್ಡ ವಿಷಯ ಎಂದು ನಾನು ಭಾವಿಸುತ್ತೇನೆ ಮತ್ತು ಅಂತರ್ ರಾಷ್ಟ್ರೀಯ ಮಹಿಳಾ ದಿನದಂದು ನಾವು ಅವರನ್ನು ಅಭಿನಂದಿಸಬೇಕಾಗಿದೆ ಎಂದರು.
ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಪಂಚ ರಾಜ್ಯಗಳಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯ ನಿರ್ವಹಣೆ ತೋರುವ ಭವಿಷ್ಯ ನುಡಿದಿವೆ. ಉತ್ತರಾಖಂಡ ಮತ್ತು ಗೋವಾದಲ್ಲಿ ಪೈಪೋಟಿ ನೀಡುವ ಸಾಧ್ಯತೆಗಳಿದ್ದು, ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಳ್ಳುವುದು ಖಚಿತ ಎನ್ನುವ ಸಮೀಕ್ಷೆಗಳು ಹೊರಬಿದ್ದಿವೆ.
ಖ್ಯಾತ ಸಮೀಕ್ಷಾ ಸಂಸ್ಥೆಯಾದ ಟುಡೇಸ್ ಚಾಣಕ್ಯ, ಉತ್ತರಪ್ರದೇಶದಲ್ಲಿ ಬಿಜೆಪಿಗೆ 294 ಸ್ಥಾನಗಳು ಬರಲಿವೆ ಎಂದು ಭವಿಷ್ಯ ನುಡಿದಿದ್ದು, ಇನ್ನುಳಿದಂತೆ, ಕಾಂಗ್ರೆಸ್ ಗೆ ಕೇವಲ 1, ಎಸ್ಪಿ ಹಾಗೂ ಮಿತ್ರಪಕ್ಷಗಳು 105, ಬಿಎಸ್ಪಿ 2 ಹಾಗೂ ಇತರ 1 ಸ್ಥಾನ ಗೆಲ್ಲಲಿವೆ ಎಂದು ಹೇಳಿದೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಆರಂಭಿಸಿರುವ ಎಸ್ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ…
ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬಾಳೆ ಬೆಳೆ ಮತ್ತು ಹೀರೇ ಬೆಳೆ ನೆಲ ಕಚ್ಚಿರುವ ಘಟನೆ ನಂಜನಗೂಡು ತಾಲ್ಲೂಕಿನ…
ದಕ್ಷಿಣ ಭಾರತದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ನಂಜನಗೂಡಿನ 8 ವರ್ಷದ ಬಾಲಕಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದು ಕೀರ್ತಿ…
ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ದೇಶಕ್ಕಾಗಿ ಸಾಯುತ್ತಿದ್ದ ಸಮಯವಿತ್ತು. ಬಿಜೆಪಿ ಅವಧಿಯಲ್ಲಿ ಭಾರತ…
ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ)…
ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ…