ಉತ್ತರ ಪ್ರದೇಶ: ನವಾಬ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕಗಲ್ಪುರ ಗ್ರಾಮದಲ್ಲಿ ಮೂವರು ಮುದ್ದಾದ ಮಕ್ಕಳು ಹಾಗೂ ಪತ್ನಿಯನ್ನು ಬರ್ಬರವಾಗಿ ಕೊಂದ ವ್ಯಕ್ತಿಯೊಬ್ಬ ತಾನೂ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೃತರನ್ನು ರಾಹುಲ್ತಿವಾರಿ ಅವರ ಪತ್ನಿ ಪ್ರೀತಿ ಮತ್ತು ಮೂವರು ಪುತ್ರಿಯರಾದ ಮಹಿ, ಪುಹು ಮತ್ತು ಪೋಹು ಎಂದು ಗುರುತಿಸಲಾಗಿದೆ.
ಮನೆಯೊಳಗೆ ಪತ್ತೆಯಾದ ಐದು ಮೃತ ದೇಹಗಳ ಪೈಕಿ ನಾಲ್ವರನ್ನು ಚೂಪಾದ ಆಯುಧದಿಂದ ಹತ್ಯೆ ಮಾಡಲಾಗಿದ್ದು, ಮನೆಯ ಯಜಮಾನನ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಶ್ವಾನದಳ ಜತೆಗೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರಾಹುಲ್ ತಿವಾರಿ ಮೂವರು ಮಕ್ಕಳನ್ನು ಒಬ್ಬೊಬ್ಬರನ್ನಾಗಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣದ ಸಂಪೂರ್ಣ ತನಿಖೆಯ ನಂತರವೇ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.