ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಮತ್ತು ಪ್ರತಿಭಟನಾ ನಿರತ ರೈತರು ಹಾಗೂ ಯುಪಿ ಸರ್ಕಾರದ ಆಡಳಿತದ ನಡುವೆ ಮಾತುಕತೆ ನಡೆದಿದ್ದು, ಪ್ರತಿಭಟನಾ ನಿರತ ನಾಲ್ವರು ರೈತರು ಸೇರಿದಂತೆ ಮೃತಪಟ್ಟ 8 ಮಂದಿ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ನಾಲ್ಕು ಮೃತ ರೈತರ ಕುಟುಂಬದವರಿಗೆ 45 ಲಕ್ಷ ರೂ ಪರಿಹಾರ ಹಾಗೂ ವಿದ್ಯಾಭ್ಯಾಸದ ಅನುಗುಣವಾಗಿ ಉದ್ಯೋಗ ನೀಡಲಾಗುತ್ತದೆ. ಗಾಯಗೊಂಡವರಿಗೆ ತಲಾ 10 ಲಕ್ಷ ರೂ. ಗಳ ಪರಿಹಾರ ಹಾಗೂ ಕುಟುಂಬ ಸದಸ್ಯರ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ನೀಡಲಾಗುವುದು ಎಂದು ವರದಿ ತಿಳಿಸಿದೆ.
ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನಕಾರ ರೈತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.