News Karnataka Kannada
Monday, May 06 2024
ಉತ್ತರ ಪ್ರದೇಶ

ಬಿಜೆಪಿಯ ಗೆಲುವಿನ ಕ್ಷೇತ್ರ ಕಡಿಮೆ ಮಾಡಿ ನಮ್ಮ ಪಕ್ಷ ಸಾಧಿಸಿ ತೋರಿಸಿದೆ; ಅಖಿಲೇಶ್ ಯಾದವ್

ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಿದಕ್ಕಾಗಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ರಾಮಮಂದಿರ ಟ್ರಸ್ಟ್‌ಗೆ ಧನ್ಯವಾದ ತಿಳಿಸಿದ್ದಾರೆ.
Photo Credit :

ಲಖನೌ : ಬಿಜೆಪಿಯ ಗೆಲುವಿನ ಕ್ಷೇತ್ರಗಳನ್ನು ಕಡಿಮೆ ಮಾಡಬಹುದು ಎಂಬುದನ್ನು ತಮ್ಮ ಪಕ್ಷ ಸಾಧಿಸಿ ತೋರಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಸಾಧನೆ ಕುರಿತು ಅವರು ಪ್ರತಿಕ್ರಿಯಿಸಿದರು.

ಸಮಾಜವಾದಿ ಪಕ್ಷವು 111 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಸ್‌ಪಿ ನೇತೃತ್ವದ ಮೈತ್ರಿಯು 125 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಇದರಲ್ಲಿ ರಾಷ್ಟ್ರೀಯ ಲೋಕದಳ 8 ಮತ್ತು ಸುಹೇಲ್‌ದೇವ್ ಸಮಾಜ್ ಪಾರ್ಟಿ 6 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ.

ನಮ್ಮ ಸ್ಥಾನಗಳನ್ನು ಎರಡೂವರೆ ಪಟ್ಟು ಮತ್ತು ಮತಗಳಿಕೆಯ ಪ್ರಮಾಣವನ್ನು ಒಂದೂವರೆ ಪಟ್ಟು ಹೆಚ್ಚಿಸಿದ್ದಕ್ಕಾಗಿ ಉತ್ತರ ಪ್ರದೇಶದ ಜನರಿಗೆ ಧನ್ಯವಾದಗಳು. ಈ ಮೂಲಕ ಬಿಜೆಪಿಯ ಸ್ಥಾನಗಳನ್ನು ಕಡಿಮೆ ಮಾಡಬಹುದು ಎಂಬುದನ್ನು ನಾವು ತೋರಿಸಿದ್ದೇವೆ. ಇದು ಮುಂದುವರಿಯುತ್ತದೆ. ಅರ್ಧಕ್ಕೂ ಅಧಿಕ ಗೊಂದಲ ಮತ್ತು ಭ್ರಮೆಗಳು ಈಗ ಕಡಿಮೆಯಾಗಿವೆ; ಇನ್ನುಳಿದವು ಮುಂದಿನ ದಿನಗಳಲ್ಲಿ ಕಡಿಮೆಯಾಗುತ್ತವೆ. ಜನರ ಹಿತಾಸಕ್ತಿಗಾಗಿ ನಡೆಯುವ ಹೋರಾಟ ಗೆಲ್ಲುತ್ತದೆ’ ಎಂದಿದ್ದಾರೆ.

403 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿರುವ ಉತ್ತರ ಪ್ರದೇಶದ 347 ಕಡೆಗಳಲ್ಲಿ ಎಸ್‌ಪಿ, ಆರ್‌ಎಲ್‌ಡಿ 33 ಮತ್ತು ಎಸ್‌ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು