ಬಿಜೆಪಿಯ ಗೆಲುವಿನ ಕ್ಷೇತ್ರ ಕಡಿಮೆ ಮಾಡಿ ನಮ್ಮ ಪಕ್ಷ ಸಾಧಿಸಿ ತೋರಿಸಿದೆ; ಅಖಿಲೇಶ್ ಯಾದವ್

ಲಖನೌ : ಬಿಜೆಪಿಯ ಗೆಲುವಿನ ಕ್ಷೇತ್ರಗಳನ್ನು ಕಡಿಮೆ ಮಾಡಬಹುದು ಎಂಬುದನ್ನು ತಮ್ಮ ಪಕ್ಷ ಸಾಧಿಸಿ ತೋರಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಸಾಧನೆ ಕುರಿತು ಅವರು ಪ್ರತಿಕ್ರಿಯಿಸಿದರು.

ಸಮಾಜವಾದಿ ಪಕ್ಷವು 111 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಸ್‌ಪಿ ನೇತೃತ್ವದ ಮೈತ್ರಿಯು 125 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಇದರಲ್ಲಿ ರಾಷ್ಟ್ರೀಯ ಲೋಕದಳ 8 ಮತ್ತು ಸುಹೇಲ್‌ದೇವ್ ಸಮಾಜ್ ಪಾರ್ಟಿ 6 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ.

ನಮ್ಮ ಸ್ಥಾನಗಳನ್ನು ಎರಡೂವರೆ ಪಟ್ಟು ಮತ್ತು ಮತಗಳಿಕೆಯ ಪ್ರಮಾಣವನ್ನು ಒಂದೂವರೆ ಪಟ್ಟು ಹೆಚ್ಚಿಸಿದ್ದಕ್ಕಾಗಿ ಉತ್ತರ ಪ್ರದೇಶದ ಜನರಿಗೆ ಧನ್ಯವಾದಗಳು. ಈ ಮೂಲಕ ಬಿಜೆಪಿಯ ಸ್ಥಾನಗಳನ್ನು ಕಡಿಮೆ ಮಾಡಬಹುದು ಎಂಬುದನ್ನು ನಾವು ತೋರಿಸಿದ್ದೇವೆ. ಇದು ಮುಂದುವರಿಯುತ್ತದೆ. ಅರ್ಧಕ್ಕೂ ಅಧಿಕ ಗೊಂದಲ ಮತ್ತು ಭ್ರಮೆಗಳು ಈಗ ಕಡಿಮೆಯಾಗಿವೆ; ಇನ್ನುಳಿದವು ಮುಂದಿನ ದಿನಗಳಲ್ಲಿ ಕಡಿಮೆಯಾಗುತ್ತವೆ. ಜನರ ಹಿತಾಸಕ್ತಿಗಾಗಿ ನಡೆಯುವ ಹೋರಾಟ ಗೆಲ್ಲುತ್ತದೆ’ ಎಂದಿದ್ದಾರೆ.

403 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿರುವ ಉತ್ತರ ಪ್ರದೇಶದ 347 ಕಡೆಗಳಲ್ಲಿ ಎಸ್‌ಪಿ, ಆರ್‌ಎಲ್‌ಡಿ 33 ಮತ್ತು ಎಸ್‌ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago