News Karnataka Kannada
Monday, April 29 2024
ಉತ್ತರ ಪ್ರದೇಶ

ಬಿಜೆಪಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿ ಜನರ ದಾರಿ ತಪ್ಪಿಸುತ್ತಿದೆ: ಮಯಾವತಿ

Mayavathi
Photo Credit :

ಲಖನೌ: ನಿರುದ್ಯೋಗ, ಹಣದುಬ್ಬರಗಳಂತಹ ಸಮಸ್ಯೆಗಳನ್ನು ಮರೆಮಾಚಲು ಬಿಜೆಪಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿ ಜನರ ದಾರಿ ತಪ್ಪಿಸುತ್ತಿದೆ. ರಾಷ್ಟ್ರ ದುರ್ಬಲಗೊಳ್ಳಲು ಕಾರಣವಾಗುತ್ತಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಯಾವತಿ ವಾಗ್ದಾಳಿ ನಡೆಸಿದ್ದಾರೆ.

ಹೆಚ್ಚುತ್ತಿರುವ ಬಡತನ, ನಿರುದ್ಯೋಗ ಮತ್ತು ಹಣದುಬ್ಬರಗಳಂತಹ ಜ್ವಲಂತ ಸಮಸ್ಯೆಗಳಿಂದ ಜನರನ್ನು ವಿಮುಖರಾಗಿಸಲು ಬಿಜೆಪಿ ಮತ್ತು ಅದರ ಸಹ ಸಂಘಟನೆಗಳು ಪ್ರಮುಖವಾಗಿ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡಿವೆ. ಇದನ್ನು ರಾಜಾರೋಷವಾಗಿ ಮಾಡಲಾಗುತ್ತಿದೆ ಎಂದು ಮಾಯಾವತಿ ಆರೋಪಿಸಿದರು.

ಇಂತಹ ಬೆಳವಣಿಗೆ ಸ್ವಾತಂತ್ರ್ಯ ಭಾರತದ ಪರಿಸ್ಥಿತಿಯನ್ನು ಯಾವ ಹಂತದಲ್ಲಿ ಬೇಕಿದ್ದರೂ ಹದಗೆಡಿಸಬಹುದು. ಜ್ಞಾನವಾಪಿ, ಮಥುರ, ತಾಜ್‌ ಮಹಲ್‌ ಮತ್ತಿತರ ಸ್ಥಳಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ ಪಿತೂರಿ ನಡೆಯುತ್ತಿದೆ. ಇಂತಹ ಪ್ರಯತ್ನಗಳಿಂದ ದೇಶ ದುರ್ಬಲಗೊಳ್ಳಲಿದೆ. ಈ ವಿಚಾರವನ್ನು ಗಂಭೀರವಾಗಿ ಬಿಜೆಪಿ ಪರಿಗಣಿಸಬೇಕು’ ಎಂದು ಮಾಯಾವತಿ ಆಗ್ರಹಿಸಿದ್ದಾರೆ.

ವಾರಾಣಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಸ್ಥಾನದ ವಿವಾದ, ಹಿಂದೂ ಮೂರ್ತಿಗಳು ಇರಬಹುದೆಂದು ಗ್ರಹಿಸಿ ತಾಜ್‌ ಮಹಲ್‌ನಲ್ಲಿ ಮುಚ್ಚಿರುವ 22 ಬಾಗಿಲುಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್‌ ಕೋರ್ಟ್‌ಗೆ ಅರ್ಜಿ ಹಾಕಿದ ವಿಚಾರಗಳಿಗೆ ಸಂಬಂಧಿಸಿ ಮಾಯಾವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದು ನಿರ್ದಿಷ್ಟ ಧರ್ಮದ ಕ್ಷೇತ್ರವಿರುವ ಸ್ಥಳಗಳ ಹೆಸರನ್ನು ಒಬ್ಬರಾದ ಮೇಲೆ ಒಬ್ಬರಂತೆ ಬದಲಾಯಿಸಲಾಗುತ್ತಿದೆ. ಇಂತಹ ಬದಲಾವಣೆಯಿಂದ ಶಾಂತಿ ಮತ್ತು ಸೌಹಾರ್ದತೆಯ ಸ್ಥಾಪನೆ ಅಸಾಧ್ಯ. ಇದು ಕೇವಲ ಪರಸ್ಪರ ಸಮುದಾಯಗಳ ಮಧ್ಯೆ ದ್ವೇಷವನ್ನಷ್ಟೇ ಹುಟ್ಟುಹಾಕುತ್ತದೆ. ಇಂತಹ ವಿಚಾರಗಳನ್ನು ಮುನ್ನೆಲೆಗೆ ತರುವ ಮೊದಲು ಸಾಮಾನ್ಯ ಜನರಿಗೆ ಅಥವಾ ರಾಷ್ಟ್ರಕ್ಕೆ ಏನು ಲಾಭವಿದೆ ಎಂಬುದಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದರು.

ರಾಷ್ಟ್ರದ ಹಿತದೃಷ್ಟಿಯಿಂದ ಬಿಎಸ್‌ಪಿಯ ಸಲಹೆ ಇದು ಎಂದು ಮಾಯಾವತಿ ಒತ್ತಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು