ಉತ್ತರ ಪ್ರದೇಶ: ಟಾಟಾ ಪ್ರಾಜೆಕ್ಟ್ಸ್ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಜೆವಾರ್ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸುವ ಗುತ್ತಿಗೆಯನ್ನು ಪಡೆದುಕೊಂಡಿದೆ.
ಒಪ್ಪಂದದ ಭಾಗವಾಗಿ, ಟಾಟಾ ಪ್ರಾಜೆಕ್ಟ್ಸ್ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್, ರನ್ ವೇ, ಮೂಲಸೌಕರ್ಯ, ರಸ್ತೆಗಳು, ಲ್ಯಾಂಡ್ ಸೈಡ್ ಸೌಲಭ್ಯಗಳು ಮತ್ತು ಇತರ ಪೂರಕ ಕಟ್ಟಡಗಳನ್ನು ನಿರ್ಮಿಸಲಿದೆ ಎಂದು ಯಮುನಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ (ವೈಐಎಪಿಎಲ್) ಪ್ರಕಟಣೆಯಲ್ಲಿ ತಿಳಿಸಿದೆ.
ಸ್ವಿಸ್ ಡೆವಲಪರ್ ಜ್ಯೂರಿಚ್ ಏರ್ ಪೋರ್ಟ್ ಇಂಟರ್ ನ್ಯಾಷನಲ್ ಎಜಿ ಯ ಅಂಗಸಂಸ್ಥೆಯಾದ ಯಮುನಾ ಇಂಟರ್ ನ್ಯಾಷನಲ್ ಏರ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಉದ್ದೇಶಕ್ಕಾಗಿ ಸ್ಥಾಪಿಸಲಾಗಿದೆ. 2019 ರಲ್ಲಿ ಜ್ಯೂರಿಚ್ ಏರ್ ಪೋರ್ಟ್ ಇಂಟರ್ ನ್ಯಾಷನಲ್ ಎಜಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಗುತ್ತಿಗೆಯನ್ನು ಪಡೆದಿದೆ.
2020ರ ಅಕ್ಟೋಬರ್ 7 ರಂದು ಉತ್ತರ ಪ್ರದೇಶ ಸರಕಾರವು ಅಭಿವೃದ್ಧಿಯನ್ನು ಪ್ರಾರಂಭಿಸಲು ಯಮುನಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎಂಜಿನಿಯರಿಂಗ್ ಮತ್ತು ನಿರ್ಮಾಣವನ್ನು ಕೈಗೊಳ್ಳಲು ಯಮುನಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಅನ್ನು ಆಯ್ಕೆ ಮಾಡಿದೆ. ದೊಡ್ಡ ಮೂಲಸೌಕರ್ಯ ಯೋಜನೆಗಳ ವಿನ್ಯಾಸ ಮತ್ತು ನಿರ್ಮಾಣದಲ್ಲಿ ಅನುಭವವನ್ನು ಹೊಂದಿರುವ ಪಟ್ಟಿ ಮಾಡಿದ ಮೂರು ಕಂಪನಿಗಳ ಪೈಕಿ ಟಾಟಾ ಪ್ರಾಜೆಕ್ಟ್ಸ್ಅನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಡೆವಲಪರ್ ಪ್ರಕಾರ, ಹೊಸ ವಿಮಾನ ನಿಲ್ದಾಣವು 2024ರ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ.
ನಾವು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಪಿಸಿ ಕೆಲಸಕ್ಕಾಗಿ ಟಾಟಾ ಪ್ರಾಜೆಕ್ಟ್ಸ್ ನೊಂದಿಗೆ ಪಾಲುದಾರಿಕೆ ಹೊಂದಲು ಸಂತೋಷವಾಗಿದೆ. ಈ ಒಪ್ಪಂದದೊಂದಿಗೆ ನಮ್ಮಯೋಜನೆಯು ಮುಂದಿನ ಹಂತವನ್ನು ಪ್ರವೇಶಿಸುತ್ತದೆ. ಪ್ರದೇಶದಲ್ಲಿ ನಿರ್ಮಾಣ ಚುಟುವಟಿಕೆಗಳು ವೇಗಗೊಳ್ಳಲಿದೆ’ ಎಂದು ಯಮುನಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ಟೋಫ್ ಸ್ಕ್ನೇಲ್ ಮನ್ ಹೇಳಿದರು.
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.