News Karnataka Kannada
Saturday, May 04 2024
ಉತ್ತರ ಪ್ರದೇಶ

ಭೀಕರ ರಸ್ತೆ ಅಪಘಾತ: ಕರ್ನಾಟಕದ 7 ಮಂದಿ ಸಾವು

Accident
Photo Credit :

ಉತ್ತರ ಪ್ರದೇಶ:  ಉತ್ತರ ಪ್ರದೇಶದ ಬಹರೈಚ್​ ಹಾಗೂ ಲಖೀಂಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 9 ಮಂದಿಗೆ ಗಂಭೀರ ಗಾಯಗಳಾಗಿವೆ. ಇವರು ಯಾವ ಊರಿನವರು ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಕರ್ನಾಟಕದಿಂದ ಹೊರಟ ಪ್ರವಾಸಿ ಬಸ್​ ಇದಾಗಿತ್ತು. ಇದರಲ್ಲಿ 16 ಮಂದಿ ಪ್ರವಾಸಿಗರು ಇದ್ದರು. ಬಹರೈಚ್​ ಹಾಗೂ ಲಖೀಂಪುರ ಹೆದ್ದಾರಿಯ ಬಳಿ ಬಸ್​ ಟ್ರಕ್‍ಗೆ ಡಿಕ್ಕಿ ಹೊಡೆದೆ. ಘಟನೆಯಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್‍ಗೆ ಪ್ರವೇಶಿಸಿದಾಗ ಅಪಘಾತ ಸಂಭವಿಸಿದೆ. ಬಸ್​ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು