News Karnataka Kannada
Saturday, April 27 2024
ಉತ್ತರ ಪ್ರದೇಶ

ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲ: ಅಸಾದುದ್ದೀನ್ ಓವೈಸಿ

Ovyc
Photo Credit :

ವಾರಾಣಸಿ: ʼಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಈಗ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲʼ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾರಾಣಸಿ ಕೋರ್ಟ್‌ ಜ್ಞಾನವಾಪಿ ಮಸೀದಿ ಮರು ಸಮೀಕ್ಷೆ ನಡೆಸುವಂತೆ ನೀಡಿರುವ ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ.

ವಾರಾಣಸಿ ಕೋರ್ಟ್ ತೀರ್ಪನ್ನು ಪೂಜಾ ಸ್ಥಳಗಳ ಕಾಯಿದೆ 1991 ರ ಘೋರ ಉಲ್ಲಂಘನೆ ಎಂದು ಕರೆದ ಓವೈಸಿ, ಬಾಬರಿ ಮಸೀದಿ ವಿವಾದದ ವಿಚಾರವಾಗಿ ಸುಪ್ರೀಂ ನೀಡಿದ್ದ ತೀರ್ಪಿನ ಸ್ಪಷ್ಟ ಉಲ್ಲಂಘನೆಯಿದು ಎಂದು ಹೇಳಿದ್ದಾರೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಹೋಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದರು.

1991 ರ ಆರಾಧನಾ ಸ್ಥಳಗಳ ಕಾಯಿದೆಯ ಪ್ರಕಾರ, ಯಾವುದೇ ಧಾರ್ಮಿಕ ಪಂಗಡದ ಪೂಜಾ ಸ್ಥಳವನ್ನು ಅಥವಾ ಬೇರೆ ಯಾವುದೇ ಧಾರ್ಮಿಕ ಪಂಗಡದ ಆರಾಧನೆಯ ಸ್ಥಳವಾಗಿ ಪರಿವರ್ತಿಸಬಾರದು ಎಂದಿದೆ. ಆಗಸ್ಟ್ 15, 1947 ರಂದು ಇದ್ದ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುವುದು ಅಪರಾಧವೆಂದು ಕಾಯಿದೆ ಸ್ಪಷ್ಟವಾಗಿ ಹೇಳುತ್ತದೆ. ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುವವರ ವಿರುದ್ಧ ಯೋಗಿ ಸರ್ಕಾರ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ವಾರಾಣಸಿ ನ್ಯಾಯಾಲಯವು ಈ ವಿಷಯದ ವಿಚಾರಣೆಯ ವೇಳೆ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಗ್ಯಾನವಾಪಿ ಮಸೀದಿಯನ್ನು ಮರು ಸಮೀಕ್ಷೆ ನಡೆಸಿ ಮೇ 17 ರೊಳಗೆ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದ ವಿಚಾರವಾಗಿ ಓವೈಸಿಯಿಂದ ಈ ಪ್ರತಿಕ್ರಿಯೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು