News Karnataka Kannada
Monday, April 29 2024
ಉತ್ತರ ಪ್ರದೇಶ

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಲು ತನ್ನ ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ ಕೇರಳ ಕೋರ್ಟ್ 40 ವರ್ಷಮತ್ತು 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿ ಆದೇಶಿಸಿದೆ.
Photo Credit : IANS

ಅಲಹಾಬಾದ್: ದೇಶದಲ್ಲಿ ಮಸೀದಿಗಳಲ್ಲಿನ ಧ್ವನಿವರ್ಧಕ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕೋಲಾಹಲವೆಬ್ಬಿದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. ಈ ವಿವಾದದ ಮಧ್ಯೆ, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕು ಅಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಪೀಠ, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಕಾನೂನು ಹೇಳುತ್ತದೆ ಅಂತಾ ಹೇಳಿದೆ.

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಧಾರ್ಮಿಕ ಸ್ಥಳದ ಒಳಗೆ ಅಳವಡಿಸಲಾಗಿರುವ ಧ್ವನಿವರ್ಧಕದ ಶಬ್ಧವು ಆವರಣದ ಹೊರಗೆ ಕೇಳಬಾರದು ಎಂದು ಹೇಳಿದ್ದರು. ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಯುಪಿ ಸರ್ಕಾರವು ಧಾರ್ಮಿಕ ಸ್ಥಳಗಳಿಂದ ಹಲವಾರು ಧ್ವನಿವರ್ಧಕಗಳನ್ನು ತೆಗೆದುಹಾಕಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು