ಉತ್ತರ ಪ್ರದೇಶ : ಮೀರತ್ ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚು ಡೆಂಗಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 18 ಮಂದಿ ಗುಣಮುಖರಾಗಿದ್ದಾರೆ ಎಂದು ಮೀರತ್ ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಇದುವರೆಗೆ 33 ಡೆಂಗಿ ಪ್ರಕರಣಗಳು ವರದಿಯಾಗಿವೆ. ಇನ್ನೂ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಯಾನವು ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 16ರ ವರೆಗೆ ಮುಂದುವರಿಯಲಿದೆ. ನಮ್ಮ ಸಮುದಾಯ ಆರೋಗ್ಯ ಕೇಂದ್ರಗಳಿಗೆ (ಸಿಎಚ್ಸಿ) ವೈದ್ಯರು ಮತ್ತು ಅಗತ್ಯ ಔಷಗಳನ್ನು ಪೂರೈಸಲಾಗಿದೆ. ಯಾವುದೇ ರೋಗಿಯ ಸ್ಥಿತಿ ಗಂಭೀರವಾಗಿದ್ದರೆ ಅವರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುವುದು ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.
ಮುಂದುವರಿದು, ಡೆಂಗ್ಯೂ ಗುಣಲಕ್ಷಣಗಳಿದ್ದರೆ ಜನರು, ವೈದ್ಯರ ಸಲಹೆ ಪಡೆಯದೆಯೇ ಔಷಧ ಪಡೆಯಬಾರದು ಎಂದೂ ಮನವಿ ಮಾಡಿದ್ದಾರೆ.
ಡೆಂಗಿ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಿದೆ ಎಂದು ಉತ್ತರ ಪ್ರದೇಶ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ ಈಗಾಗಲೇ ತಿಳಿಸಿದ್ದಾರೆ.