ಮುಜಾಫರ್ ನಗರ: 10 ನೇ ತರಗತಿ ವಿದ್ಯಾರ್ಥಿನಿಗೆ ಮತ್ತು ಬರುವ ಪದಾರ್ಥ ನೀಡಿ ಆಕೆಯ ಮೇಲೆ ಸಾದ್ಪುರ ಗ್ರಾಮದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿತ ಅತ್ಯಾಚಾರವೆಸಗಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರದಂದು ಪಾಠಕ್ಕೆ ತೆರಳಿದ ವಿದ್ಯಾರ್ಥಿನಿಗೆ ಮತ್ತು ಬರುವ ಪದಾರ್ಥ ನೀಡಿದ ಇಬ್ಬರು ಆಕೆಯನ್ನು ಸಾದ್ಪುರ ಗ್ರಾಮದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಸರಣಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ದೂರಿನಲ್ಲಿ ಆರೋಪಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಇಬ್ಬರು ಕಾಯುತ್ತಿದ್ದರು ಅವರೂ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿ ಬಹಳ ಹೊತ್ತಾದರೂ ಮನೆಗೆ ಬಾರದ ಕಾರಣ ಆಕೆಯನ್ನು ಹುಡುಕಿ ಹೊರಟ ಪೋಷಕರು, ಕುಟುಂಬ ಸದಸ್ಯರಿಗೆ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ.
ಮನೆಗೆ ಬಂದ ಬಳಿಕ ಆಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಪೋಷಕರು ನೀಡಿದ ದೂರನ್ನು ಆಧರಿಸಿ ನಾಲ್ವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ, ಅಪ್ರಾಪ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಎಸ್ ಹೆಚ್ಒ ಬಬ್ಲು ಸಿಂಗ್ ವರ್ಮ ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…