News Karnataka Kannada
Monday, April 29 2024
ಉತ್ತರ ಪ್ರದೇಶ

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಹಿಂದೂ ಯುವಕನ ಕೊಲೆ!

Ullal: Man commits suicide by pouring petrol
Photo Credit :

ಹೈದ್ರಾಬಾದ್‌: ಹೊಸದಾಗಿ ಮದುವೆಯಾಗಿದ್ದ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಜೋಡಿಯ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದು ಯುವಕ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್‌ ನ ಎಲ್‌ ಬಿ ನಗರದಲ್ಲಿ ನಡೆದಿದೆ.

ಕಾಲೇಜು ಸಹಪಾಠಿಗಳಾದ ಬಿಲ್ಲಪುರಂ ನಾಗರಾಜು ಮತ್ತು ಸೈಯೆದ್‌ ಅಶ್ರಿನ್‌ ಸುಲ್ತಾನಾ ಇಬ್ಬರೂ ಪರಸ್ಪರ ಪ್ರೀತಿಸಿ ಈ ವರ್ಷ ಜನೆವರಿ ತಿಂಗಳಲ್ಲಿ ಮದುವೆಯಾಗಿದ್ದರು. ಮದುವೆಯ ನಂತರ ಯುವತಿ ಸೈಯೆದ್‌ ಅಶ್ರಿನ್‌ ಸುಲ್ತಾನಾ ತನ್ನ ಹೆಸರನ್ನು ಪಲ್ಲವಿ ಎಂದು ಬದಲಾಯಿಸಿಕೊಂಡಿದ್ದಳು. ಈ ಸಂಬಂಧ ಯುವತಿಯ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತುಎನ್ನಲಾಗಿದೆ.

ನವ ದಂಪತಿ ಬುಧವಾರ ರಾತ್ರಿ ಬೈಕ್‌ ನಲ್ಲಿ ಸಂಚರಿಸುತ್ತಿದ್ದ ವೇಳೆ ಅವರ ಮೇಲೆ ಇಬ್ಬರು ರಾಡ್‌ ನಿಂದ ಹಲ್ಲೆ ಮಾಡಿದ್ದರು. ಹಲ್ಲೆಯಲ್ಲಿ ನಾಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮದುವೆಯಾದ ಯುವತಿಯ ಸಹೋದರರೇ ಈ ಮರ್ಯದಾ ಹತ್ಯೆ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು ಪೋಲೀಸರು ಹೆಚ್ಚಿನ ತನಿಖೆ ಕೈಗೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ ಎಂದು ವರದಿಗಳು ತಿಳಿಸಿವೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು