News Karnataka Kannada
Monday, April 29 2024
ಉತ್ತರ ಪ್ರದೇಶ

ಮೋದಿ ಕಾಲಿಗೆ ನಮಸ್ಕರಿಸಿದ ಬಿಜೆಪಿ ನಾಯಕನಿಗೆ ಕೈ ಸನ್ನೆಯಲ್ಲೇ ಬೇಡ ಎಂದ ಪ್ರಧಾನಿ!

PM to visit Kerala, Karnataka on Sept 1-2
Photo Credit :

ಪ್ರಧಾನಿ ಮೋದಿ ಅವರ ಕಾಲಿಗೆ ಬಿದ್ದ ಉನ್ನಾವೋ ಜಿಲ್ಲಾ ಬಿಜೆಪಿ ಅಧ್ಯಕ್ಷ ಅವಧೇಶ್ ಕಟಿಯಾರ್ ಅವರ ಪಾದವನ್ನು ಸ್ವತಃ ಪ್ರಧಾನಿ ಮೋದಿಯೇ ಮುಟ್ಟಿದ್ದಾರೆ. ಇದೀಗ ಈ ಕುರಿತ ವಿಡಿಯೋ ವೈರಲ್ ಆಗಿದೆ.

ಉತ್ತರ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದರು. ಈ ವೇಳೆ ಮೋದಿಗೆ ಶ್ರೀರಾಮನ ವಿಗ್ರಹವನ್ನು ನೀಡಿ ಸ್ವಾಗತಿಸಿ, ಅವರ ಪಾದಗಳಿಗೆ ನಮಸ್ಕಾರ ಮಾಡಲು ಬಾಗಿದ ಉನ್ನಾವೋ ಜಿಲ್ಲೆಯ ಬಿಜೆಪಿ ಅಧ್ಯಕ್ಷರಿಗೆ ವೇದಿಕೆಯಲ್ಲೇ ಪ್ರಧಾನಿ ಮೋದಿ ಪಾಠ ಮಾಡಿದ್ದಾರೆ.

ತಮ್ಮ ಕಾಲಿಗೆ ನಮಸ್ಕರಿಸಲು ಮುಂದಾದ ಬಿಜೆಪಿ ಅಧ್ಯಕ್ಷರಿಗೆ ತಡೆದ ಪ್ರಧಾನಿ ಮೋದಿ ಒಂದೂ ಮಾತನಾಡದೆ ಸನ್ನೆಯ ಮೂಲಕವೇ ಆ ರೀತಿ ಮಾಡಬಾರದೆಂದು ಸೂಚಿಸಿದ್ದಾರೆ.ಬಳಿಕ ತಾವು ಕೂಡ ಕೆಳಗೆ ಬಾಗಿ ಕಟಿಯಾರ್ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಬಿಜೆಪಿಯಿಂದ ಉನ್ನಾವೊ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಅವಧೇಶ್ ಕಟಿಯಾರ್ ಅವರು ಈ ಹಿಂದೆ ಉನ್ನಾವೊದಲ್ಲಿ ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು