News Karnataka Kannada
Saturday, May 04 2024
ಉತ್ತರ ಪ್ರದೇಶ

ಯೋಗಿ ಆದಿತ್ಯನಾಥ್ ಅವರನ್ನು ಮತ್ತೆ ಮಠಕ್ಕೆ ಕಳುಹಿಸುವ ಸಮಯ ಬಂದಿದೆ; ಮಾಯಾವತಿ

Mayavathi
Photo Credit :

ವಾರಣಾಸಿ : ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು “ಮತ್ತೆ ಅವರ ಮಠಕ್ಕೆ” ಕಳುಹಿಸುವ ಸಮಯ ಬಂದಿದೆ ಎಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಗುರುವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಕುಚಿತ ಮತ್ತು ಜಾತಿವಾದಿ ಮನಸ್ಥಿತಿಯಿಂದ ಆಡಳಿತ ಮಾಡಿದ್ದಾರೆ, ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರನ್ನು ಪ್ರತಿ ಹಂತದಲ್ಲೂ ಕಡೆಗಣಿಸಿದ್ದಾರೆ ಎಂದು ಆರೋಪಿಸಿರುವ ಮಾಯಾವತಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಬಿಎಸ್ ಪಿ ಚುನವಣಾ ಸಭೆಯಲ್ಲಿ ಮಾತನಾಡಿದ ಅವರು, ಎಕ್ಸಿಟ್ ಪೋಲ್ಸ್ ಸಮೀಕ್ಷೆಯಲ್ಲಿ ಬಿಜೆಪಿ ಪರ ವರದಿ ನೀಡಿರುವುದಕ್ಕೆ ಮಾಧ್ಯಮಗಳ ವಿರುದ್ಧ ಮಾಯಾವತಿ ಕಿಡಿ ಕಾರಿದರು. ಈ ಜನಾಭಿಪ್ರಾಯ ಮತ್ತು ಅದರ ಉತ್ಸಾಹವನ್ನು ನೋಡಿದರೆ, ನೀವು ಬಿಎಸ್‌ಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮತ್ತು ನಿಮ್ಮ’ಬೆಹೆನ್‌ಜಿ’ಯನ್ನು ಐದನೇ ಬಾರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಲು ಹಾಗೂ ಯೋಗಿಯನ್ನು ವಾಪಸ್ ಅವರ ಮಠಕ್ಕೆ, ಕಳುಹಿಸಲು ನೀವು ಸಿದ್ಧರಾಗಿರುವಿರಿ ಎಂದು ನಾನು ಹೇಳಬಲ್ಲೆ ಎಂದು ಮಾಯಾವತಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈ ಸರ್ಕಾರವು ಮುಸ್ಲಿಮರ ಅಭಿವೃದ್ಧಿ ಮತ್ತು ಭದ್ರತೆಯ ಬಗ್ಗೆ ಯಾವುದೇ ಗಮನವನ್ನು ನೀಡಿಲ್ಲ, ಅವರನ್ನು ನಕಲಿ ಪ್ರಕರಣಗಳಲ್ಲಿ ಸಿಲುಕಿಸಿ ಜೀವನ ಹಾಳು ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು