News Karnataka Kannada
Sunday, May 12 2024
ಉತ್ತರ ಪ್ರದೇಶ

ಯೋಗಿ ಆದಿತ್ಯನಾಥ್‌ ಇಂದು ಪ್ರಧಾನಿ ಮೋದಿ ಸೇರಿದಂತೆ ಇತರ ಕೇಂದ್ರ ನಾಯಕರ ಭೇಟಿ

Modi Yogi
Photo Credit : Twitter

ಉತ್ತರ ಪ್ರದೇಶದಲ್ಲಿ ಅದ್ಭುತ ಮತಗಳೊಂದಿಗೆ ಜಯಭೇರಿ ಬಾರಿಸಿದ ಯೋಗಿ ಆದಿತ್ಯನಾಥ್‌ ಅವರು ಇಂದು ಪ್ರಧಾನಿ ಮೋದಿ ಸೇರಿದಂತೆ ಇತರ ಕೇಂದ್ರ ನಾಯಕರನ್ನು ಭೇಟಿ ಮಾಡಲಿದ್ದಾರೆ.

ದೆಹಲಿಗೆ ಎರಡು ದಿನದ ಪ್ರವಾಸಕ್ಕೆ ಹೊರಟಿರುವ ಯೋಗಿ ಆದಿತ್ಯನಾಥ್‌ ಅವರು ಹೊಸ ಸರ್ಕಾರ ರಚನೆ, ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಿ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಯೋಗಿ ಆದಿತ್ಯನಾಥ್ ಅವರು ತಮ್ಮ ಅವಧಿ ಮುಗಿಯುತ್ತಿದ್ದಂತೆ ರಾಜೀನಾಮೆ ಸಲ್ಲಿಸಿ, ಹೊಸ ಸರ್ಕಾರದ ಸ್ಥಾಪನೆಯ ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟದ್ದಾರೆ. ಆದರೆ ಪ್ರಮಾಣವಚನ ಸ್ವೀಕಾರದ ವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿರುವಂತೆ ರಾಜ್ಯಪಾಲರು ತಿಳಿಸಿದ್ದಾರೆ.

ಇನ್ನು ಮಾ.18ರಂದು ಹೋಳಿ ಆಚರಣೆಯ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ 255 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು