ಅಯೋಧ್ಯೆ : ರಾಮಮಂದಿರದ ಎರಡನೇ ಹಂತದ ನಿರ್ಮಾಣ ಕಾರ್ಯಗಳಿಗೆ ಮಂಗಳವಾರ ಚಾಲನೆ ನೀಡಲಾಗಿದ್ದು, ಈ ಹಂತದಲ್ಲಿ ದೇವಸ್ಥಾನದ ಪ್ಲಿಂಥ್ ನಿರ್ಮಾಣಕ್ಕೆ ಕರ್ನಾಟಕ ಚಾಮರಾಜನಗರದ ಕೊಳ್ಳೆಗಾಲ ಪ್ರದೇಶದ ಕಪ್ಪು ಗ್ರಾನೈಟ್ ಕಲ್ಲನ್ನು ಬಳಸಲಾಗುತ್ತಿದೆ. ಇದರ ಅಕ್ಕಪಕ್ಕದಲ್ಲಿ ಮಿರ್ಜಾಪುರದ ಕಲ್ಲುಗಳು ಮತ್ತು ರಾಜಸ್ಥಾನದ ಗುಲಾಬಿ ಬಣ್ಣದ ಕಲ್ಲುಗಳಲ್ಲಿ ಶಿಲ್ಪಗಳನ್ನು ಕೆತ್ತಲಾಗುತ್ತಿದೆ ಎಂದು ತಿಳಿದು ಬಂದಿದೆ .
‘ಈಗಾಗಲೇ ಕೊಳ್ಳೆಗಾಲ ಮತ್ತು ಮಿರ್ಜಾಪುರಗಳಿಂದ ಕಲ್ಲುಗಳ ಪೂರೈಕೆ ಆರಂಭವಾಗಿದೆ. ಭಾರತಾದ್ಯಂತ ವಿಎಚ್ಪಿ 2 ಲಕ್ಷ ಇಟ್ಟಿಗೆಗಳನ್ನು ದೇವಸ್ಥಾನಕ್ಕಾಗಿ ಸಂಗ್ರಹ ಮಾಡಿದೆ. 1989ರಿಂದ ಭಕ್ತರು ದೇವಸ್ಥಾನ ನಿರ್ಮಾಣಕ್ಕೆ 3 ಲಕ್ಷಕ್ಕೂ ಇಟ್ಟಿಗೆಗಳನ್ನು ನೀಡಿದ್ದಾರೆ ಈಗ ಇವುಗಳನ್ನು ದೇವಸ್ಥಾನ ನಿರ್ಮಾವಾಗುತ್ತಿರುವ ಸ್ಥಳಕ್ಕೆ ಸಾಗಿಸಲಾಗುತ್ತಿದೆ ಎಂದು ರಾಮ ಜನ್ಮ ಭೂಮಿ ಟ್ರಸ್ಟ್ನ ಸದಸ್ಯ ಅನಿಲ್ ಮಿಶ್ರಾ ಹೇಳಿದ್ದಾರೆ.