News Karnataka Kannada
Tuesday, April 30 2024
ಉತ್ತರ ಪ್ರದೇಶ

ವಂಚನೆ ಪ್ರಕರಣ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಜೈಲಿನಿಂದ ಬಿಡುಗಡೆ

Ajam Khan
Photo Credit :

ಲಖನೌ: ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯ ಜೈಲಿನಿಂದ ಶುಕ್ರವಾರ ಬಿಡುಗಡೆ ಆಗಿದ್ದಾರೆ.

87 ಪ್ರಕರಣಗಳಲ್ಲಿ ಅಜಂ ಖಾನ್ ಬಿಡುಗಡೆಗೆ ಆದೆಶ ಮಾಡಲಾಗಿರುವುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಸಂವಿಧಾನದ 142ನೇ ವಿಧಿಯ ವಿಶೇಷ ಅಧಿಕಾರವನ್ನು ಬಳಸಿಕೊಂಡು ಅಜಂಖಾನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.  ಅಜಂ ಖಾನ್ ಅವರ ಪುತ್ರ ಮತ್ತು ಶಾಸಕ ಅಬ್ದುಲ್ಲಾ ಅಜಂ, ಪ್ರಗತಿಶೀಲ ಸಮಾಜವಾದಿ ಪಕ್ಷದ (ಲೋಹಿಯಾ) ನಾಯಕ ಶಿವಪಾಲ್ ಸಿಂಗ್ ಯಾದವ್ ಮತ್ತು ಬೆಂಬಲಿಗರು ಸಮಾಜವಾದಿ ಪಕ್ಷದ ಹಿರಿಯ ನಾಯಕನನ್ನು ಬರಮಾಡಿಕೊಂಡರು.

ಬಿಡುಗಡೆಯ ನಂತರ ಅವರು ತಮ್ಮ ಹುಟ್ಟೂರಾದ ರಾಂಪುರಕ್ಕೆ ತೆರಳಿದರು. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬಿಡುಗಡೆ ಆದೇಶ ಜೈಲಿ ತಲುಪಿದ್ದು, ಎಲ್ಲಾ ಪ್ರಕ್ರಿಯೆಗಳ ನಂತರ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಅಜಂ ಖಾನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಸೀತಾಪುರ ಜೈಲಿನ ಜೈಲರ್ ಆರ್ ಎಸ್ ಯಾದವ್ ತಿಳಿಸಿದ್ದಾರೆ.

ಭೂಕಬಳಿಕೆ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ 27 ತಿಂಗಳಿಂದ ಅಜಂ ಖಾನ್ ಜೈಲಿನಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು