News Karnataka Kannada
Thursday, May 02 2024
ಉತ್ತರ ಪ್ರದೇಶ

ವಿವಾಹ ಸಮಾರಂಭದಲ್ಲಿ ನೃತ್ಯ ವಿಚಾರಕ್ಕೆ ಗಲಾಟೆ

Marriage Main Newsk 6672427104
Photo Credit :

ಪ್ರತಾಪಗಢ  : ಕ್ಷುಲ್ಲಕ ಕಾರಣಕ್ಕೆ ವಿವಾಹ ಸಮಾರಂಭವೊಂದರಲ್ಲಿ ನಡೆದ ಗಲಾಟೆಯು ಪೊಲೀಸರ ಆಗಮನದ ಬಳಿಕ ತಣ್ಣಗಾದ ಘಟನೆಯು ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರತಾಪಗಢ ಜಿಲ್ಲೆಯ ಕುಂದಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ನರಸಿಂಗ್​ಗಢ ಎಂಬಲ್ಲಿ ವಧುವಿನ ಮನೆ ತಲುಪಿದ ಬಳಿಕ ಅರ್ಧ ಗಂಟೆಗೂ ಹೆಚ್ಚು ಕಾಲ ವರನ ಸ್ನೇಹಿತರು ನೃತ್ಯ ಮಾಡಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ.

ವಧುವಿನ ಕುಟುಂಬಸ್ಥರು ಸ್ವಾಗತ ಸಮಾರಂಭಕ್ಕಾಗಿ ಕಾಯುತ್ತಿದ್ದರೆ ವರನ ಕಡೆಯವರು ನೃತ್ಯದಲ್ಲಿ ಮುಳುಗಿದ್ದರು.ವರ ಕಾರಿನ ಒಳಕ್ಕೆ ಕುಳಿತಿದ್ದರೆ ಆತನ ಸ್ನೇಹಿತರು ಕಾರಿನ ಮುಂದೆ ಅರ್ಧ ಗಂಟೆಗೂ ಹೆಚ್ಚು ಕಾಲ ನೃತ್ಯ ಮಾಡಿದ್ದಾರೆ. ವಧುವಿನ ಕಡೆಯವರು ನೃತ್ಯ ನಿಲ್ಲಿಸಿ ಸ್ವಾಗತ ಸಮಾರಂಭಕ್ಕೆ ಆಗಮಿಸುವಂತೆ ಮನವಿ ಮಾಡಿದ್ದರು. ಬಳಿಕ ಇದೇ ವಿಚಾರವಾಗಿ ಗಲಾಟೆ ಆರಂಭವಾಗಿದೆ.

ಗಲಾಟೆ ವಿಕೋಪಕ್ಕೆ ತಿರುಗಿದ ಪರಿಣಾಮ ವಧುವಿನ ಕಡೆಯವರು ಮದುವೆ ಮನೆಗೆ ಮುತ್ತಿಗೆ ಹಾಕಿದ್ದು ಮಾತ್ರವಲ್ಲದೇ ಕೆಲ ಅತಿಥಿಗಳ ಮೇಲೆ ಹಲ್ಲೆ ನಡೆಸಿದ್ದರು. ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ ಎಂಬುದು ಗಮನಕ್ಕೆ ಬರುತ್ತಿದ್ದಂತೆಯೇ ವರ ತನ್ನ ಸ್ನೇಹಿತರ ಜೊತೆಯಲ್ಲಿ ನೇರವಾಗಿ ಪೊಲೀಸ್​ ಠಾಣೆಗೆ ತೆರಳಿದ್ದಾನೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಲಾಟೆಯನ್ನು ನಿಯಂತ್ರಿಸಿ ವಿವಾಹ ಕಾರ್ಯವನ್ನು ನೆರವೇರಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು