News Karnataka Kannada
Monday, April 29 2024
ಉತ್ತರ ಪ್ರದೇಶ

ಸಚಿವೆ ಸ್ಮೃತಿ ಇರಾನಿ ವಿರುದ್ದ ಅವಹೇಳನಕಾರಿ ಪೋಸ್ಟ್‌ ; ಪ್ರಾಧ್ಯಾಪಕ ಜೈಲಿಗೆ

Smruti Irani 21 7 21
Photo Credit :

ಲಕ್ನೋ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಹಾಕಿದ ಆರೋಪದಲ್ಲಿ ಉತ್ತರ ಪ್ರದೇಶದ ಪ್ರಾಧ್ಯಾಪಕನಿಗೆ ಜಾಮೀನು ನಿರಾಕರಿಸಿರುವ ಫಿರೋಜಾಬಾದ್ ನ್ಯಾಯಾಲಯ ಜೈಲಿಗೆ ಕಳಿಸಿದೆ.
ಫಿರೋಜಾಬಾದ್‌ನ ಎಸ್‌ಆರ್‌ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಶಹರ್ಯಾರ್ ಅಲಿ ಫೇಸ್‌ಬುಕ್‌ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಲಾಗಿದೆ. ತದನಂತರ ಕಾಲೇಜಿನ ಆಡಳಿತ ಮಂಡಳಿ ಅವರನ್ನು ಅಮಾನತು ಮಾಡಿದೆ. ಶಹರ್ಯಾರ್ ಅಲಿ ತಮ್ಮ ಫೇಸ್‌ಬುಕ್ ಖಾತೆ ಹ್ಯಾಕ್ ಹಾಕಿದೆ. ಹಾಗಾಗಿ ತನಗೆ ಬಂಧನದ ವಿರುದ್ಧ ರಕ್ಷಣೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಫೇಸ್‌ಬುಕ್ ಖಾತೆ ಹ್ಯಾಕ್ ಆಗಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು.
ತದನಂತರ ಮೇ ತಿಂಗಳಿನಲ್ಲಿ ಶಹರ್ಯಾರ್ ಅಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು ಸಹ ತಮ್ಮ ಬಂಧನದಿಂದ ವಿನಾಯಿತಿ ಪಡೆಯಲು ಸಾಧ್ಯವಾಗಿರಲಿಲ್ಲ. ಈಗ ಅವರು ಫಿರೋಜಾಬಾದ್ ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಹಾಕಿದ್ದು ಅಲ್ಲಿಯೂ ಜಾಮೀನು ಸಿಗದ ಕಾರಣ ಜೈಲಿಗೆ ಕಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು