News Karnataka Kannada
Sunday, April 28 2024
ಉತ್ತರ ಪ್ರದೇಶ

ಸ್ವತಃ ಮಹಿಳೆಯಾಗಿ ಇಂತಹ ಹೇಳಿಕೆಗಳನ್ನು ನೀಡಬಾರದಿತ್ತು, ಸ್ಮೃತಿ ಇರಾನಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ

Priyanka Gandhi
Photo Credit :

ಲಕ್ನೊ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದು, ಅವರು ಸ್ವತಃ ಮಹಿಳೆಯಾಗಿ ಇಂತಹ ಹೇಳಿಕೆಗಳನ್ನು ನೀಡಬಾರದಿತ್ತು ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ 2022 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅನ್ನು ಸಜ್ಜುಗೊಳಿಸುತ್ತಿರುವ ರಾಹುಲ್ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ‘ಲಡ್ಕಿ ಹೂ, ಲಡ್ ಸಕ್ತಿ ಹೂ’ (ನಾನು ಹುಡುಗಿ, ಹೋರಾಟ ಮಾಡಬಲ್ಲೆ) ಘೋಷಣೆಗೆ ಪ್ರತಿಕ್ರಿಯೆಯಾಗಿ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆ ನೀಡಿದ್ದರು.

‘ಘರ್ ಪರ್ ಲಡ್ಕಾ ಹೈ, ಪರ್ ಲಡ್ ನಹೀಂ ಸಕ್ತಾ’ (ಮನೆಯಲ್ಲಿ ಹುಡುಗನಿದ್ದಾನೆ. ಆದರೆ ಅವನಿಗೆ ಹೋರಾಡಲು ಆಗುವುದಿಲ್ಲ) ಎಂದು ರಾಹುಲ್ ಗಾಂಧಿ ಕುರಿತು ಸ್ಮೃತಿ ಇರಾನಿ ನೀಡಿರುವ ಹೇಳಿಕೆ ತಪ್ಪಾಗಿದೆ. ಮಹಿಳೆಯಾಗಿರುವ ಕಾರಣ ಇಂತಹ ಹೇಳಿಕೆ ಸರಿಯಲ್ಲ. ಬದಲಾಗಿ ಮಹಿಳೆಯರನ್ನು ಪ್ರೋತ್ಸಾಹಿಸಬೇಕು. ಅವರು ತಮಗಾಗಿ ಹೋರಾಡಬೇಕು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಮಹಿಳೆಯರು ರಾಜಕೀಯದಲ್ಲಿ ಪಾಲ್ಗೊಳ್ಳಬೇಕು, ತಮ್ಮ ಶಕ್ತಿಯನ್ನು ಗುರುತಿಸಬೇಕು ಹಾಗೂ ಸಮಾಜದಲ್ಲಿನ ದೌರ್ಜನ್ಯಗಳ ವಿರುದ್ಧ ನಿಲ್ಲಬೇಕು ಎಂದು ಅವರು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು