News Karnataka Kannada
Monday, April 29 2024
ಉತ್ತರ ಪ್ರದೇಶ

ಹಿಂದಿನ ಸರಕಾರಗಳು ಜನರ ತೆರಿಗೆ ಹಣವನ್ನು ಖಬರ್‌ಸ್ಥಾನಕ್ಕೆ ಬಳಕೆ ಮಾಡುತ್ತಿದ್ದವು- ಯೋಗಿ ಆದಿತ್ಯನಾಥ್‌

Yogi Aditya
Photo Credit :

 ಉತ್ತರ ಪ್ರದೇಶ:  ಉತ್ತರ ಪ್ರದೇಶದಲ್ಲಿ 2017ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಗುಲಗಳ ಮರು ಅಭಿವೃದ್ಧಿಗೆ  ತೆರಿಗೆ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಆಯೋಜಿಸಲಾಗಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಬಿಜೆಪಿ ಸರಕಾರಕ್ಕೆ ಬರುವ ಮೊದಲು ಇದ್ದ ಸರಕಾರಗಳು ಜನರ ತೆರಿಗೆ ಹಣವನ್ನು ಖಬರ್‌ಸ್ಥಾನಕ್ಕೆ ಬಳಕೆ ಮಾಡುತ್ತಿದ್ದವು ಎಂದು  ಆರೋಪಿಸಿದ್ದಾರೆ.

ಮುಂದಿನ ವರ್ಷದ ಹೋಳಿ ಹಬ್ಬದವರೆಗೆ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯ ಅನ್ವಯ ಫ‌ಲಾನುಭವಿಗಳಿಗೆ ಆಹಾರ ನೀಡುವುದನ್ನು ಮುಂದುವರಿಸಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಪ್ರಕಟಿಸಿದ್ದಾರೆ.

ಬಳಿಕ ಅವರು 661 ಕೋಟಿ ರೂ. ಮೌಲ್ಯದ 50 ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೂಡ ಚಾಲನೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಕೇಂದ್ರ ಸರಕಾರದಿಂದಲೂ ವಿವಿಧ ರೀತಿಯ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಅದರ ಮೂಲಕ ರಾಜ್ಯದಲ್ಲಿ 500 ದೇಗುಲಗಳು ಮತ್ತು ಇತರ ಧಾರ್ಮಿಕ ಕ್ಷೇತ್ರಗಳು ಪುನರುಜ್ಜೀವನಗೊಳ್ಳುತ್ತಿವೆ ಎಂದು ಪ್ರಕಟಿಸಿದರು. ರಾಮ ಮಂದಿರ ನಿರ್ಮಾಣಕ್ಕೆ ಮೊದಲ ಮೂವತ್ತು ವರ್ಷಗಳಲ್ಲಿ ಜೈ ಶ್ರೀ ರಾಮ್‌ ಎನ್ನುವುದೂ ಅಪರಾಧವಾಗಿತ್ತು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು