News Karnataka Kannada
Monday, May 06 2024
ಉತ್ತರ ಪ್ರದೇಶ

ಹೈದರಾಬಾದ್‌ ಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ : ಇಂದು ಶ್ರೀರಾಮಾನುಜಾಚಾರ್ಯರ ಚಿನ್ನದ ಪ್ರತಿಮೆ ಅನಾವರಣ

Kovind
Photo Credit :

ಹೈದರಾಬಾದ್ ನ ಮುಚ್ಚಿಂತಲ್ ನಲ್ಲಿ ಶಾಸ್ತ್ರೋಕ್ತವಾಗಿ ನಡೆಯುತ್ತಿರುವ ಶ್ರೀರಾಮಾನುಜಾಚಾರ್ಯ ಜನ್ಮಸಹಸ್ರಾಬ್ದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಂದು ಮಧ್ಯಾಹ್ನ 3:30ರ ವೇಳೆಗೆ ಜೀವಾ ಆಶ್ರಮಕ್ಕೆ ತಲುಪಲಿದ್ದಾರೆ. ಅಲ್ಲಿರುವ ಶ್ರೀರಾಮಾನುಜಾಚಾರ್ಯರ ಸಮಾನತೆ ಪ್ರತಿಮೆಯ ಬಳಿ ಇರುವ ಚಿನ್ನದ ಮೂರ್ತಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಫೆ.2ರಿಂದ ಹೈದರಾಬಾದ್ ನಲ್ಲಿ ಶ್ರೀರಾಮಾನುಜಾಚಾರ್ಯರ ಜನ್ಮ ಸಹಸ್ರಾಬ್ದಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಇಂದು ಮತ್ತು ನಾಳೆ ಈ ಜನ್ಮಸಹಸ್ರಾಬ್ದಿ ಕಾರ್ಯಕ್ರಮ ಮುಕ್ತಾಯಗೊಳ್ಳಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನಿನ್ನೆ ಶನಿವಾರ ಟಾಲಿವುಡ್ ನಟ ಚಿರಂಜೀವಿ ದಂಪತಿ, ಜ್ಯೂ. ಎನ್ ಟಿ ಆರ್ ಕುಟುಂಬ, ಅಲ್ಲು ಅರ್ಜುನ್ ಕುಟುಂಬ ಸಮಾನತೆಯ ಪ್ರತಿಮೆ ಹಾಗೂ 108 ದಿವ್ಯ ದೇಶಗಳಿಗೆ ಭೇಟಿ ನೀಡಿದ್ದಾರೆ.

ಹೈದರಾಬಾದ್ನ ಹೊರವಲಯದಲ್ಲಿರುವ ಶ್ರೀರಾಮಾನುಜಾಚಾರ್ಯರ ಆಶ್ರಮದ 45 ಎಕರೆ ಸಂಕೀರ್ಣದಲ್ಲಿ 216 ಅಡಿ ಎತ್ತರದ ಪಂಚಲೋಹದ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಇದು ವಿಶ್ವದ ಅತ್ಯಂತ ಎತ್ತರದ ಮೂರ್ತಿಯಾಗಿದೆ. 1000 ಕೋಟಿ ರೂ. ವೆಚ್ಚದಲ್ಲಿ ಈ ಮೂರ್ತಿ ನಿರ್ಮಾಣ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು