News Karnataka Kannada
Monday, May 06 2024
ಉತ್ತರ ಪ್ರದೇಶ

ಅಯೋಧ್ಯೆಯ ರಾಮಲಲ್ಲಾನ ದರ್ಶನಕ್ಕೆ 1.5 ಕೋಟಿ ಜನ ಭೇಟಿ : ಚಂಪತ್ ರಾಯ್

ರಾಮಮಂದಿರದಲ್ಲಿ ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ದಿನದಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೋಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.
Photo Credit : NewsKarnataka

ಅಯೋಧ್ಯೆ: ರಾಮಮಂದಿರದಲ್ಲಿ ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ದಿನದಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೋಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ ಜನರು ರಾಮಲಲ್ಲಾನ ದರ್ಶನಕ್ಕೆ ಬಂದಿದ್ದಾರೆ ಎಂದರು.

ರಾಮಲಲ್ಲಾನ ‘ಪ್ರಾಣ ಪ್ರತಿಷ್ಠೆ’ ನಡೆದ ದೇವಾಲಯದ ನೆಲ ಮಹಡಿ ಮಾತ್ರ ಪೂರ್ಣಗೊಂಡಿದೆ. ಮೊದಲ ಅಂತಸ್ತಿನ ಕೆಲಸ ಇನ್ನೂ ನಡೆಯುತ್ತಿದೆ. ದೇವಾಲಯದ ಸುತ್ತಲೂ 14 ಅಡಿ ಅಗಲದ ಭದ್ರತಾ ಗೋಡೆ ನಿರ್ಮಿಸಲಾಗುವುದು.

ಈ ಗೋಡೆಯನ್ನು ದೇವಾಲಯದ ‘ಪರ್ಕೋಟ’ ಎಂದು ಕರೆಯಲಾಗುತ್ತದೆ. ‘ಪರ್ಕೋಟ’ ಬಹುಪಯೋಗಿಯಾಗಿದ್ದು, ಅಲ್ಲಿ ಇನ್ನೂ 6 ದೇವಾಲಯಗಳನ್ನು ನಿರ್ಮಿಸಲಾಗುವುದು. ಅದು ಭಗವಾನ್ ಶಂಕರ, ಭಗವಾನ್ ಸೂರ್ಯ, ‘ಗರ್ಭಗೃಹ’ ಮತ್ತು ಎರಡು ತೋಳುಗಳಲ್ಲಿ, ಭಗವಾನ್ ಹನುಮಾನ್ ಮತ್ತು ಮಾ ಅನ್ನಪೂರ್ಣ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ ಮತ್ತು ಮಹರ್ಷಿ ಅಗಸ್ತ್ಯರನ್ನೂ ನಿರ್ಮಿಸಲಾಗುವುದು. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇಗುಲಗಳನ್ನು ಕೂಡ ನಿರ್ಮಿಸಲಾಗುವುದು.

ದೇವಾಲಯವು ಏಕಕಾಲದಲ್ಲಿ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇಲ್ಲಿನ ಮರಗಳು ಮತ್ತು ಗಿಡಗಳನ್ನು ಸಂರಕ್ಷಿಸಲಾಗಿದೆ. 600 ಗಿಡಗಳು ಆವರಣದಲ್ಲಿದ್ದು, ರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ ಮತ್ತು ಒಳಚರಂಡಿ ಸಂಸ್ಕರಣಾ ಘಟಕವೂ ಇದೆ ಎಂದು ಚಂಪತ್ ರಾಯ್ ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು