ಉತ್ತರ ಪ್ರದೇಶ

2 ಮುಸ್ಲಿಂ ಕುಟುಂಬದ 8 ಜನರ ಘರ್ ವಾಪಸಿ

ಉತ್ತರಪ್ರದೇಶ : ದೇಶದಲ್ಲಿ ಮುಸ್ಲಿಮರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂಬ ಆಪಾದನೆಯ ಮಧ್ಯೆಯೇ ಉತ್ತರಪ್ರದೇಶದ ಮುಜಾಫರ್​ನಗರ ಜಿಲ್ಲೆಯ ಮೀರತ್​ನಲ್ಲಿ ಎರಡು ಮುಸ್ಲಿಂ ಕುಟುಂಬಗಳ ಎಂಟು ಜನರು ತಾವೇ ಸ್ವತಃ ಒಪ್ಪಿಕೊಂಡು ಹಿಂದು ಧರ್ಮವನ್ನು ಶಾಸ್ತ್ರೋಕ್ತವಾಗಿ ಸ್ವೀಕರಿಸಿದ್ದಾರೆ.

ಮೀರತ್​ನ ಮುಸ್ಲಿಂ ಕುಟುಂಬದ 8 ಜನರು ‘ಘರ್​ ವಾಪಸಿ’ ಆಗಿದ್ದಾರೆ. ಬಾಘ್ರಾದ ಯಶ್ವೀರ್​ ಆಶ್ರಮದಲ್ಲಿ ನಡೆದ ಶುದ್ಧಿ ಯಜ್ಞದಲ್ಲಿ ಪಾಲ್ಗೊಂಡ ಮುಸ್ಲಿಂ ಕುಟುಂಬದವರಿಗೆ ಹಿಂದೂ ಧರ್ಮದ ಮರು ದೀಕ್ಷೆ ನೀಡಲಾಗಿದೆ. ಆಚಾರ್ಯ ಮೃಗೇಂದ್ರ ಬ್ರಹ್ಮಚಾರಿ ಅವರು ವೇದ ಮಂತ್ರಗಳನ್ನು ಪಠಿಸಿ ಘರ್​ ವಾಪಸಿ ಮಾಡಿಕೊಂಡರು.

ಮತಾಂತರಗೊಂಡವರು ವಾಪಸ್​: ಬಳಿಕ ಆಶ್ರಮದ ಮಹಂತ್ ಸ್ವಾಮಿ ಯಶ್ವೀರ್ ಮಹಾರಾಜ್ ಮಾತನಾಡಿ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಿಂದುಗಳನ್ನು ಅನ್ಯಮತಕ್ಕೆ ಮತಾಂತರ ಮಾಡಿದ್ದರು. ಕೆಲವು ಮೌಲಾನಾ, ಮೌಲ್ವಿಗಳು ಹಿಂದೂ ಧರ್ಮದ ಬಡ ಜನರಿಗೆ ಆಮಿಷ ಒಡ್ಡಿ ಮತ್ತು ಅಥವಾ ಇತರೆ ಮಾರ್ಗಗಳಿಂದ ಮುಸ್ಲಿಮರನ್ನಾಗಿ ಪರಿವರ್ತಿಸಿದ್ದಾರೆ. ಇದೀಗ ಅಂದು ಮತಾಂತರಗೊಂಡ ಜನರಲ್ಲಿ ಜಾಗೃತಿ ಮೂಡಿದೆ. ಇದರ ಫಲವಾಗಿ ಹಿಂದು ಧರ್ಮಕ್ಕೆ ವಾಪಸ್​ ಆಗುತ್ತಿದ್ದಾರೆ ಎಂದು ಹೇಳಿದರು

ಇಂದು ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಮರ 2 ಕುಟುಂಬದ 8 ಮಂದಿ ಶುದ್ಧಿ ಯಾಗದಲ್ಲಿ ಭಾಗವಹಿಸಿ, ಗಾಯತ್ರಿ ಮಂತ್ರವನ್ನು ಪಠಿಸುವ ಮೂಲಕ ಮತ್ತೆ ಹಿಂದೂ ಧರ್ಮವನ್ನು ಸೇರಿಕೊಂಡಿದ್ದಾರೆ ಎಂದು ತಿಳಿಸಿದರು.

ಹಿಂದು ಧರ್ಮಕ್ಕೆ ವಾಪಸ್ಸಾದ 8 ಮಂದಿಯು ಮುಸ್ಲಿಂ ಹೆಸರನ್ನು ತೊರೆದು ಹಿಂದು ಧರ್ಮದ ಹೆಸರುಗಳನ್ನು ಪಡೆದುಕೊಂಡಿದ್ದಾರೆ. ಶಾಹಿಸ್ತಾ ಎಂಬ ಮಹಿಳೆಗೆ ರಾಧಾ ಎಂದು ಮರು ನಾಮಕರಣ ಮಾಡಿದರೆ, ಬರ್ಖಾ ಎಂಬಾಕೆಗೆ ವರ್ಷ, ರಶೀದಾಗೆ ಗೀತಾ, ಅಕ್ಬರ್ ಹೆಸರಿನ ವ್ಯಕ್ತಿಗೆ ಕೃತಪಾಲ್, ಇಕ್ರಾ ಬದಲಾಗಿ ಶೀತಲ್, ಗುಲ್ಲು ಎಂಬಾತನಿಗೆ ಕಾರ್ತಿಕ್‌, ಎಹ್ಸಾನ್‌ಗೆ ಸಚಿನ್ ಮತ್ತು ಹರೂನ್‌ಗೆ ಅರುಣ್ ಎಂದು ಹೆಸರಿಸಲಾಗಿದೆ.

Ashika S

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

25 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

33 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

34 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

43 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

58 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

1 hour ago