ಉತ್ತರ ಪ್ರದೇಶ: ಅಧಿಕಾರಶಾಹಿ ಪುನಾರಚನೆಯ ಭಾಗವಾಗಿ 21 ಐಎಎಸ್ ಅಧಿಕಾರಿಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ವರ್ಗಾವಣೆ ಮಾಡಿದೆ. ಲಕ್ನೋ, ಕಾನ್ಪುರ, ಗೋರಖ್ಪುರ ಸೇರಿದಂತೆ 6 ಪ್ರದೇಶಗಳ ಅಧಿಕಾರಿಗಳು ಸಹ ಈ ವರ್ಗಾವಣೆ ಪಟ್ಟಿಯಲ್ಲಿದ್ದಾರೆ. ಕಳೆದ ವಾರ ಕಾನ್ಪುರದಲ್ಲಿ ನಡೆದ ಹಿಂಸಾಚಾರದತ್ತ ಸರ್ಕಾರ ಗಮನ ಹರಿಸಿದ್ದು, ಈ ನಿರ್ಧಾರ ಕೈಗೊಂಡಿದೆ.
ಗಲಾಟೆ ಬಳಿಕ ಕಾನ್ಪುರ ಡಿಎಂ ನೇಹಾ ಶರ್ಮಾ ಅವರನ್ನು ಸ್ಥಳೀಯ ಸಂಸ್ಥೆಗಳ ನಿರ್ದೇಶಕಿಯಾಗಿ ನೇಮಿಸಲಾಗಿದೆ. ಸಮಯಕ್ಕೆ ಸರಿಯಾಗಿ ಸ್ಪಂದಿಸದ ಕಾರಣದಿಂದಾಗಿಯೇ ಹಿಂಸಾಚಾರ ಸಂಭವಿಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಶರ್ಮಾ ಜೊತೆಗೆ ಇತರೆ ಒಂಭತ್ತು ಜಿಲ್ಲೆಗಳ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಬಲ್ಲಿಯಾ, ಅಲಿಗಢ, ಬಸ್ತಿ, ಜಲೌನ್, ಇಟಾವಾ, ಫಿರೋಜಾಬಾದ್ ಮತ್ತು ಗೋರಖ್ಪುರದ ಅಧಿಕಾರಿಗಳು ಸಹ ವರ್ಗಾವಣೆಯಾಗಿದ್ದಾರೆ.
ಯೋಗಿ ಸರ್ಕಾರ ರಾಜ್ಯದಲ್ಲಿ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಪ್ರಮುಖ ವರ್ಗಾವಣೆಯಾಗಿದೆ. ಉತ್ತರ ಪ್ರದೇಶ ಸರ್ಕಾರ ಕಳೆದ ತಿಂಗಳು 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.
ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ.
ಮುಟ್ಟಿನ ಸಮಯದಲ್ಲಿ ನೋವು ತಾಳಲಾರದೆ ಅನಿವಾರ್ಯಕ್ಕೆ ಪೈನ್ ಕಿಲ್ಲರ್ ಸೇವಿಸುವುದು ಈಗ ಸಾಮನ್ಯವಾಗಿಬಿಟ್ಟಿದೆ. ಕೆಲವರಿಗೆ ಇದರ ಪರಿಣಾಮವು ಅರಿವಾಗಿದೆ. ಆದರೂ…
ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್…
ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…
ಭೋಪಾಲ್ನ ಪ್ರತಿ ಬೂತ್ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…