21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ

ಉತ್ತರ ಪ್ರದೇಶ: ಅಧಿಕಾರಶಾಹಿ ಪುನಾರಚನೆಯ ಭಾಗವಾಗಿ 21 ಐಎಎಸ್ ಅಧಿಕಾರಿಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ವರ್ಗಾವಣೆ ಮಾಡಿದೆ. ಲಕ್ನೋ, ಕಾನ್ಪುರ, ಗೋರಖ್‌ಪುರ ಸೇರಿದಂತೆ 6 ಪ್ರದೇಶಗಳ ಅಧಿಕಾರಿಗಳು ಸಹ ಈ ವರ್ಗಾವಣೆ ಪಟ್ಟಿಯಲ್ಲಿದ್ದಾರೆ. ಕಳೆದ ವಾರ ಕಾನ್ಪುರದಲ್ಲಿ ನಡೆದ ಹಿಂಸಾಚಾರದತ್ತ ಸರ್ಕಾರ ಗಮನ ಹರಿಸಿದ್ದು, ಈ ನಿರ್ಧಾರ ಕೈಗೊಂಡಿದೆ.

ಗಲಾಟೆ ಬಳಿಕ ಕಾನ್ಪುರ ಡಿಎಂ ನೇಹಾ ಶರ್ಮಾ ಅವರನ್ನು ಸ್ಥಳೀಯ ಸಂಸ್ಥೆಗಳ ನಿರ್ದೇಶಕಿಯಾಗಿ ನೇಮಿಸಲಾಗಿದೆ. ಸಮಯಕ್ಕೆ ಸರಿಯಾಗಿ ಸ್ಪಂದಿಸದ ಕಾರಣದಿಂದಾಗಿಯೇ ಹಿಂಸಾಚಾರ ಸಂಭವಿಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಶರ್ಮಾ ಜೊತೆಗೆ ಇತರೆ ಒಂಭತ್ತು ಜಿಲ್ಲೆಗಳ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಬಲ್ಲಿಯಾ, ಅಲಿಗಢ, ಬಸ್ತಿ, ಜಲೌನ್, ಇಟಾವಾ, ಫಿರೋಜಾಬಾದ್ ಮತ್ತು ಗೋರಖ್‌ಪುರದ ಅಧಿಕಾರಿಗಳು ಸಹ ವರ್ಗಾವಣೆಯಾಗಿದ್ದಾರೆ.

  • ಕೃಷ್ಣ ಕರುಣೇಶ್- ಗೋರಖ್‌ಪುರಕ್ಕೆ ವರ್ಗಾವಣೆ.
  • ವಿಜಯ್ ಕಿರಣ್ ಆನಂದ್- ಶಾಲಾ ಶಿಕ್ಷಣದ ಪ್ರಭಾರ ನಿರ್ದೇಶಕರಾಗಿ, ಮೂಲ ಶಿಕ್ಷಣ ಇಲಾಖೆಯ ವಿಶೇಷ ಕಾರ್ಯದರ್ಶಿಯಾಗಿ ನೇಮಕ
  • ಅನಾಮಿಕಾ ಸಿಂಗ್- ಮಹಿಳಾ ಕಲ್ಯಾಣ ಮತ್ತು ಮಕ್ಕಳ ಅಭಿವೃದ್ಧಿ, ಪೋಷಣೆ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ
  • ಸೂರ್ಯಪಾಲ್ ಗಂಗ್ವಾರ್-  ಲಕ್ನೋ ಡಿಎಂ ಆಗಿ ನೇಮಕ
  • ಅಭಿಷೇಕ್ ಪ್ರಕಾಶ್- ಮೂಲಸೌಕರ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ಕಾರ್ಯದರ್ಶಿ ಹುದ್ದೆ.
  • ವಿಶಾಖ್ ಜಿ- ಕಾನ್ಪುರ ನಗರದ ಹೊಸ ಡಿಎಂ ಆಗಿ ನೇಮಕ.
  • ಭವಾನಿ ಸಿಂಗ್ ಖಗರೌತ್-ಮಧ್ಯಾಂಚಲ್ ವಿದ್ಯುತ್ ವಿತ್ರನ್ ನಿಗಮದ ಎಂಡಿ
  • ಅನುಪಮ್ ಶುಕ್ಲಾ-ವಿಶೇಷ ಇಂಧನ ಕಾರ್ಯದರ್ಶಿ
  • ನೀಲಂ ಸಾಯಿ- ಜೌನ್‌ಪುರದ ಹೊಸ ಸಿಡಿಒ
  • ಸೆಲ್ವ ಕುಮಾರಿ-ಬರೇಲಿಯ ನೂತನ ಆಯುಕ್ತರಾಗಿ ನೇಮಕ
  • ಸೌಮ್ಯಾ ಅಗರ್ವಾಲ್-ಬಲ್ಲಿಯಾ ಡಿಎಂ ಆಗಿ ನೇಮಕ.
  • ಇಂದರ್ ವಿಕ್ರಮ್ ಸಿಂಗ್-ಅಲಿಗಢದ ಹೊಸ ಡಿಎಂ
  • ಪ್ರಿಯಾಂಕಾ ನಿರಂಜನ್-ಬಸ್ತಿಯ ನೂತನ ಡಿಎಂ
  • ಚಾಂದಿನಿ ಸಿಂಗ್- ಜಲೌನ್‌ನ ಹೊಸ ಡಿಎಂ

ಯೋಗಿ ಸರ್ಕಾರ ರಾಜ್ಯದಲ್ಲಿ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಪ್ರಮುಖ ವರ್ಗಾವಣೆಯಾಗಿದೆ. ಉತ್ತರ ಪ್ರದೇಶ ಸರ್ಕಾರ ಕಳೆದ ತಿಂಗಳು 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.

Sneha Gowda

Recent Posts

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು

ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

8 mins ago

ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ.

30 mins ago

ಯುವತಿಯರೇ ಎಚ್ಚರ : ಮುಟ್ಟಿನ ನೋವಿಗೆ ಪೈನ್​​ ಕಿಲ್ಲರ್ ಸೇವಿಸಿ ಕೋಮಾಗೆ ಜಾರಿದ ಯುವತಿ

ಮುಟ್ಟಿನ ಸಮಯದಲ್ಲಿ ನೋವು ತಾಳಲಾರದೆ ಅನಿವಾರ್ಯಕ್ಕೆ ಪೈನ್​​ ಕಿಲ್ಲರ್ ಸೇವಿಸುವುದು ಈಗ ಸಾಮನ್ಯವಾಗಿಬಿಟ್ಟಿದೆ. ಕೆಲವರಿಗೆ ಇದರ ಪರಿಣಾಮವು ಅರಿವಾಗಿದೆ. ಆದರೂ…

49 mins ago

ಪೈಲಟ್‌ಗಳ ಸಾಮೂಹಿಕ ರಜೆ : 70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್‌ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌…

1 hour ago

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ!

ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…

2 hours ago

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…

2 hours ago