ಭದೋಹಿ: ದುರ್ಗಾ ಪೂಜೆಯ ಪೆಂಡಾಲ್ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 3 ಮಂದಿ ಮೃತಪಟ್ಟು, 64 ಮಂದಿ ಗಾಯಗೊಂಡಿರುವ ಘಟನೆ ನರ್ಥುವಾ ಹಳ್ಳಿಯಲ್ಲಿ ನಡೆದಿದೆ.
ಹಾಲೊಜೆನ್ ಲೈಟ್ ಹೆಚ್ಚು ಬಿಸಿಯಾದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡವರಲ್ಲಿ ಹೆಚ್ಚಿನ ಮಂದಿ ಮಹಿಳೆಯರು ಮತ್ತು ಮಕ್ಕಳಾಗಿದ್ದು, ಅವಘಡ ಕುರಿತಂತೆ ತನಿಖೆಗೆ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ.
ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.