News Karnataka Kannada
Monday, May 06 2024
ಉತ್ತರ ಪ್ರದೇಶ

ಉತ್ತರಪ್ರದೇಶದಲ್ಲಿ ಟ್ರಕ್ ಗೆ ಕಾರು ಡಿಕ್ಕಿ: 5 ಮಂದಿ ಸಾವು

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit :

ಉತ್ತರಪ್ರದೇಶ: ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಹೊಡೆದು ದರ್ಗಾಕ್ಕೆ ಹೋಗುತ್ತಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರಾಖಂಡದ ಲಾಲ್​ಪುರ ಗ್ರಾಮದಲ್ಲಿ ನಡೆದಿದೆ.

ಮೃತರು ಉತ್ತರಾಖಂಡದ ರಾಮ್ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲರೂ ವ್ಯಾಪಾರಿಗಳಾಗಿದ್ದು, ದರ್ಗಾಕ್ಕೆ ತೆರಳುತ್ತಿದ್ದರು. ರಾಮ್​ ನಗರದಿಂದ ಬಿಲ್​ಗ್ರಾಮ್ ಷರೀಫ್‌ಗೆ ಹೋಗುತ್ತಿದ್ದರು. ಒಟ್ಟೂ ಎರಡು ವಾಹನಗಳಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು.

ಮೃತಪಟ್ಟಿವರನ್ನು ಖೇತಾಡಿ ರಾಮನಗರದ ಸಗೀರ್ (35), ಮೊಹಮ್ಮದ್ ತಾಹಿರ್ (40) ಹಾಗೂ ಮೊಹಮ್ಮದ್  ಫರೀದ್ (35) ಹಾಗೂ ಭವಾನಿಗಂಜ್​ ನಿವಾಸಿಗಳಾದ ಮುಝಮ್ಮಿಲ್ (36), ಇಮ್ರಾನ್ ಖಾನ್ (38) ಎಂದು ಗುರುತಿಸಲಾಗಿದೆ.

ಲಾಲ್‌ಪುರ ಔಟ್‌ಪೋಸ್ಟ್ ಹೆದ್ದಾರಿ ಬಳಿ ಕಾರು ಪಂಕ್ಚರ್​ ಆಗಿಬಿಟ್ಟಿದೆ. ಆ ಸಂದರ್ಭದಲ್ಲಿ ಎದುರಿಗೆ ಬರುತ್ತಿದ್ದ  ಟ್ರಕ್ ಗೆ   ಡಿಕ್ಕಿ ಹೊಡೆದಿದೆ. ಈ ರಭಸಕ್ಕೆ ಕಾರಿನಲ್ಲಿ ಕುಳಿತಿದ್ದ ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಕಾರಿನಿಂದ ಹೊರ ತೆಗೆದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು