News Karnataka Kannada
Friday, May 03 2024
ಉತ್ತರ ಪ್ರದೇಶ

ಕಾರು, ಲಾರಿ ನಡುವೆ ಅಪಘಾತ: ಒಂದೇ ಕುಟುಂಬದ 6 ಜನರ ಸಾವು

ಲಾರಿ ಮತ್ತು ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ ಘಟನೆ ಗೌರ ಬಾದಶಪುರ ಪೊಲೀಸ್​ ಠಾಣಾ ವ್ಯಾಪ್ತಿಯ ಕರ್ಜಗ್​-ಕೆರಕಟ್​​ ರಸ್ತೆಯಲ್ಲಿ ನಡೆದಿದೆ. 
Photo Credit : News Kannada

ಜಾನ್​ಪುರ: ಲಾರಿ ಮತ್ತು ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ ಘಟನೆ ಗೌರ ಬಾದಶಪುರ ಪೊಲೀಸ್​ ಠಾಣಾ ವ್ಯಾಪ್ತಿಯ ಕರ್ಜಗ್​-ಕೆರಕಟ್​​ ರಸ್ತೆಯಲ್ಲಿ ನಡೆದಿದೆ.

ಸಾವನ್ನಪ್ಪಿದವರನ್ನು ಬಿಹಾರದ ಸೀತಾಮರ್ಹಿ ಜಿಲ್ಲೆಯ ಗಜಧರ್ ಶರ್ಮಾ (60), ಮಗ ಅನೀಶ್ ಶರ್ಮಾ (35), ಜವಾಹರ್ ಶರ್ಮಾ (57), ಅವರ 17 ವರ್ಷದ ಮಗ ಸೋನಮ್ (34), ರಿಂಕು (32) ಬಲಿಯಾದವರು ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಗ್ಗಿನ ಜಾವ 2:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಪ್ರಯಾಗ್​ರಾಜ್​ಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್​ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮಗು ಸೇರಿ ಮೂವರು ಬದುಕುಳಿದಿದ್ದು, ವಾರಣಾಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು