ರಾಮಲಲ್ಲಾಗೆ 7,000 ಕೆ.ಜಿ ತೂಕದ ‘ರಾಮ ಹಲ್ವಾ’ ನೈವೇದ್ಯ

ಅಯೋಧ್ಯೆ: ರಾಮ ಮಂದಿರದ  ಉದ್ಘಾಟನಾ ಕಾರ್ಯಕ್ರಮಕ್ಕೆ 7,000 ಕೆ.ಜಿ ತೂಕದ ‘ರಾಮ ಹಲ್ವಾ’ ತಯಾರಿಸಲು ನಾಗ್ಪುರದ ಬಾಣಸಿಗ ವಿಷ್ಣು ಮನೋಹರ್ ಅವರು ಮುಂದಾಗಿದ್ದಾರೆ.

ಈ ಬಗ್ಗೆ ಬಾಣಸಿಗ ವಿಷ್ಣು ಮನೋಹರ್ ಮಾತನಾಡಿ, ರಾಮ ಹಲ್ವಾ  ತಯಾರು ಮಾಡಲು 12 ಸಾವಿರ ಲೀಟರ್ ಸಾಮರ್ಥ್ಯದ ವಿಶೇಷ ಕಡಾಯಿ (ಕಡಾಯಿ) ತಯಾರಿಸಿದ್ದು, ಇದರ ತೂಕ 1, 300 ರಿಂದ 1400 ಕೆ.ಜಿ. ಇದ್ದು, ಇದನ್ನು ಉಕ್ಕಿನಿಂದ ತಯಾರಿಸಲಾಗಿದೆ. ಇದರ ಗಾತ್ರ 10 ಅಡಿ. ಇದು 12,000 ಲೀಟರ್ ಸಾಮರ್ಥ್ಯ ಹೊಂದಿದ್ದು. ಅದನ್ನು ಎತ್ತಲು ಕ್ರೇನ್ ಅಗತ್ಯವಿದೆ.

ರಾಮ ಹಲ್ವಾ ತಯಾರು ಮಾಡಲು 900 ಕೆ.ಜಿ ರವೆ, 1000 ಕೆ.ಜಿ ತುಪ್ಪ, 1000 ಕೆ.ಜಿ ಸಕ್ಕರೆ, 2000 ಲೀಟರ್ ಹಾಲು, 2,500 ಲೀಟರ್ ನೀರು, 300 ಕೆ.ಜಿ ಡ್ರೈ ಫ್ರೂಟ್ಸ್ ಮತ್ತು 75 ಕೆ.ಜಿ ಏಲಕ್ಕಿ ಪುಡಿಯನ್ನು ಬಳಸಿ ಹಲ್ವಾವನ್ನು ತಯಾರಿಸಲಾಗುವುದು ಎಂದು‌ ಅವರು ಹೇಳಿದ್ದಾರೆ.

ರಾಮಲಲ್ಲಾಗೆ  ಅರ್ಪಿಸಿದ ನಂತರ ಈ ಪ್ರಸಾದವನ್ನು ಸುಮಾರು ಒಂದೂವರೆ ಲಕ್ಷ ಜನರಿಗೆ ವಿತರಿಸಲಾಗುತ್ತದೆ. ಇದಕ್ಕೆ ನಾವು ʼಕರಸೇವೆಯಿಂದ ಪಾಕಸೇವೆʼ ಎಂದು ಹೆಸರಿಸಿದ್ದೇವೆ ಎಂದು ಅವರು ಹೇಳಿದರು.

Ashika S

Recent Posts

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

9 seconds ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

11 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

21 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

31 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

37 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

42 mins ago